harish gowda (1)
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಹರೀಶ್ ಗೌಡ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ. ಯಾವ ಯಾವ ಬೂತ್ಗಳಲ್ಲಿ ಮತಗಳ್ಳತನ ಆಗಿದೆ ಎಂದು ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಈ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷ ಹೋರಾಟ ಮಾಡ್ತಿದೆ. ನಮ್ಮ ಕ್ಷೇತ್ರದ ಮತಗಳ್ಳತನ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ದಸರಾ ಹತ್ತಿರ ಬರುತ್ತಿದೆ. ಜಂಬೂ ಸವಾರಿ ಸಾಗುವ ರಸ್ತೆ ಮಾರ್ಗ ಚೆನ್ನಾಗಿದೆ. ನಗರದ ಬೇರೆ ಬೇರೆ ಕಡೆ ಸಾಕಷ್ಟು ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುತ್ತದೆ. ಈಗಾಗಲೇ ನಗರದ 120 ಕಿಲೋ ಮೀಟರ್ ರಸ್ತೆಯನ್ನು ಕಾಂಕ್ರಿಟ್ ರಸ್ತೆ ಮಾಡಲು ಸಿಎಂ ನಿರ್ಧಾರ ಮಾಡಿದ್ದಾರೆ. ಮಳೆ ಕಡಿಮೆ ಆದ ಮೇಲೆ ರಸ್ತೆ ಕೆಲಸ ಶುರು ಆಗುತ್ತದೆ ಎಂದು ಹೇಳಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…