ಮೈಸೂರು: ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಜಾತಿ ಸಮೀಕ್ಷೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಎಷ್ಟು ಗೊಂದಲ ಇದೆ ಎಂಬುದನ್ನು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೋಡಿದ್ರೆ ಗೊತ್ತಾಗುತ್ತೆ. 60 ಪ್ರಶ್ನೆ ಜನರ ಮುಂದಿಟ್ಟಿದ್ದಾರೆ. ಈ ಸಮೀಕ್ಷೆಯಿಂದ ಗೊಂದಲಗಳೇ ಹೆಚ್ಚು. ರಾಜ್ಯ ಸರ್ಕಾರ ಪೂರ್ವ ತಯಾರಿ ಇಲ್ಲದೆ ಆತುರದ ನಿರ್ಧಾರ ತೆಗೆದುಕೊಂಡಿದೆ. ವಿಶೇಷ ಚೇತರನ್ನು ಸೇರಿಸಿಕೊಂಡಿರುವುದಕ್ಕೆ ಟೀಕೆಗಳು ವ್ಯಕ್ತವಾಗುತ್ತಿದೆ. ನವೆಂಬರ್ ಕ್ರಾಂತಿ ಎಂದು ಕಾಂಗ್ರೆಸ್ನಲ್ಲಿ ಚರ್ಚೆ ನಡೆಯುತ್ತಿದೆ. ನವೆಂಬರ್ ಕ್ರಾಂತಿಗೂ ಜಾತಿ ಗಣತಿ ಕ್ರಾಂತಿಗೂ ಸಂಬಂಧ ಇರುವಂತೆ ಚರ್ಚೆ ನಡೆಯುತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಇದು ನಮ್ಮ ಪಕ್ಷದ ನಿಲುವು. ದೇಶಗಳಲ್ಲಿ ಜಾತಿ ಗಣತಿ ಮಾಡುತ್ತೇವೆ ಎಂದು ಪ್ರಧಾನಮಂತ್ರಿಗಳು ಘೋಷಣೆ ಮಾಡಿದ್ದಾರೆ. ಈ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಟಿ ಮಾಡುವ ಅವಶ್ಯಕತೆ ಇರಲಿಲ್ಲ. ಸಿದ್ದರಾಮಯ್ಯ ಬಹಳ ಆತುರದಲ್ಲಿದ್ದಾರೆ.
ಇದನ್ನೂ ಓದಿ:-ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನ ಬಂಧನ
ಮೈಸೂರಿನಲ್ಲಿ ಅವರ ಶಕ್ತಿ ಪ್ರದರ್ಶನ ನಡೆಸಿದ್ರು. ಸಿದ್ದರಾಮಯ್ಯ ರ್ಯಾಂಪ್ ವಾಕ್ ಮಾಡ್ತಾ ಇದ್ರು. ಆಗ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಇಬ್ಬರೂ ಅಡ್ರೆಸ್ಗೆ ಇರಲಿಲ್ಲ. ಕಾಂಗ್ರೆಸ್ ಶಾಸಕರೇ ನವೆಂಬರ್ ಕ್ರಾಂತಿ ಎಂದು ಹೇಳುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ಅದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ವೇಣುಗೋಪಾಲ್ ಹೇಳ್ತಾರೆ. ಆದ್ರೆ ಹೈಕಮಾಂಡ್ ಎಲ್ಲೂ ನಾಯಕತ್ವ ಬದಲಾವಣೆ ಇಲ್ಲಾ ಎಂದು ಹೇಳುತ್ತಿಲ್ಲ. ಆದ್ದರಿಂದ ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗುತ್ತೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…