ಮೈಸೂರು ನಗರ

ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧಪಡಿಸಿಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ

ಮೈಸೂರು: ಸಿದ್ದರಾಮಯ್ಯ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಜಾತಿಗಣತಿ ಜಾರಿಗೆ ತರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು 10 ವರ್ಷಗಳ ನಂತರ ಜಾತಿಗಣತಿ‌ ಜಾರಿಗೆ ಹೊರಟಿದ್ದಾರೆ. ತಮ್ಮ ಸ್ಥಾನವನ್ನ ಭದ್ರಪಡಿಸಿಕೊಳ್ಳಲು ಜಾರಿಗೆ ತರುವ ಯತ್ನ ನಡೆಯುತ್ತಿದೆ. ಕಾಂತರಾಜ‌ ವರದಿಯನ್ನು 10 ವರ್ಷದ ಬಳಿಕ ಜಾರಿಗೆ ತರಲು ಹೋಗಿದ್ದು ಅವೈಜ್ಞಾನಿಕ. 150 ಕೋಟಿ ರೂ ವೆಚ್ಚ ಮಾಡಿ ತಯಾರಿಸಿದ ವರದಿ ಬುಟ್ಟಿಗೆ ಹಾಕಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಭ್ರಷ್ಟಾಚಾರ ರಾಜ್ಯಾದ್ಯಂತ ತಾಂಡವವಾಡುತ್ತಿದೆ. ರಾಜ್ಯ ಉಸ್ತುವಾರಿ ಸುರ್ಜೇವಾಲ ರಾಜ್ಯಕ್ಕೆ ಬಂದಿದ್ರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧಪಡಿಸಿಕೊಂಡಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು ಯಾವ ಕಾರಣಕ್ಕೆ ಅವರು ಸೈಟ್ ವಾಪಸ್ ನೀಡಿದ್ರು? ಸಚಿವರಾಗಿದ್ದ ನಾಗೇಂದ್ರ ಯಾಕೆ ರಾಜೀನಾಮೆ ನೀಡಿದ್ರು? ಬಿಜೆಪಿ ನಡೆಸಿದ ಜನಾಕ್ರೋಶ ಯಾತ್ರೆಯಿಂದ‌ ಜನ ಜಾಗೃತರಾಗಿದ್ದಾರೆ. ಈ ಸರ್ಕಾರದ ವಿರುದ್ಧ ಶೀಘ್ರ ದಂಗೆ ಹೇಳ್ತಾರೆ. ಸಿಎಂ ಅಧಿಕೃತವಾಗಿ ರಾಜೀನಾಮೆ‌ ಕೊಡುವುದೊಂದೇ ಭಾಗ್ಯ ಎಂದು ಲೇವಡಿ ಮಾಡಿದರು.

ಇನ್ನು ಎಲ್ಲರೂ ಸಿಎಂ ರಾಜೀನಾಮೆ ಪಡೆದು ದೆಹಲಿಗೆ ಕಳಿಸಲು ತೀರ್ಮಾನ ಮಾಡಿದ್ದಾರೆ. ಅಹಿಂದ ಹೆಸರನ್ನು ಹೇಳಿಕೊಂಡು ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ. ಎಲ್ಲ ಅಹಿಂದ ವರ್ಗಗಳನ್ನ ಅವರು ಕಡೆಗಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಪಲ್ಲಟ ಆಗಲಿದೆ. ಅತಿ ಶೀಘ್ರದಲ್ಲೆ ಸಿಎಂ ರಾಜೀನಾಮೆ ನೀಡುತ್ತಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಣಗಳಾಗ್ತಿವೆ. ಮೊನ್ನೆ ರಾಮನಗರದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿ.ಆರ್.ಪಾಟೀಲ್ ಲಾಟರಿ ಸಿಎಂ ಎಂದಿದ್ದಾರೆ ದೇವರಾಜ ಅರಸು ಅವರ ದಾಖಲೆ ಮುರಿತೀನಿ ಎಂದಿದ್ದರು. ಅದೇ ರೀತಿ ರಾಜೀನಾಮೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago