ಮೈಸೂರು ನಗರ

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಪ್ರತಿ ದಿನವೂ ಕಳ್ಳತನ ನಡೆಯುತ್ತಿದ್ದು, ಖದೀಮರು ರೋಗಿಯ ಸಂಬಂಧಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ.

ಆಸ್ಪತ್ರೆ ಹೊರಗಡೆ ಮಲಗಿರುವಾಗ ಮೊಬೈಲ್, ಹಣ ಕಳ್ಳತನವಾಗುತ್ತಿದ್ದು, ನಿನ್ನೆ ಮಲಗಿದ್ದ ವ್ಯಕ್ತಿಯ ಬಳಿ ಇದ್ದ 9 ಸಾವಿರ ಹಣ ಹಾಗೂ ಒಂದು ಮೊಬೈಲ್‌ ಕಳುವಾಗಿದೆ.

ಎರಡು ದಿನದ ಹಿಂದೆ ಕಳ್ಳನೋರ್ವ ಹಣ ಎಗರಿಸಿ ಹೋಗುವಾಗ ವ್ಯಕ್ತಿಯು ಕೂಗಿಕೊಂಡಿದ್ದಾನೆ. ಈ ವೇಳೆ ಕಳ್ಳನನ್ನು ಹಿಡಿಯಲು ಹೋದ ಅಕ್ಕಪಕ್ಕದಲ್ಲಿದ್ದವರಿಗೆ ದೊಡ್ಡದಾದ ಚಾಕು ತೋರಿಸಿ ಕಳ್ಳ ಪರಾರಿಯಾಗಿದ್ದಾನೆ. ಈ ವೇಳೆ ಚಾಕು ಕಂಡು ಭಯಗೊಂಡ ಜನರು ವಾಪಸ್ ಆಸ್ಪತ್ರೆ ಬಳಿ ಓಡಿ ಬಂದಿದ್ದಾರೆ.

ಸೆಕ್ಯೂರಿಟಿ ಇಲ್ಲದ ಚಲುವಾಂಬ ಆಸ್ಪತ್ರೆಯಲ್ಲಿ ರೋಗಿಯ ಸಂಬಂಧಿಕರಿಗೆ ಕಳ್ಳರ ಕಾಟ ಹೆಚ್ಚಾಗಿದೆ. ಎಲ್ಲಿ ದೂರು ಕೊಡಬೇಕೋ ಗೊತ್ತಿಲ್ಲ, ಅದಕ್ಕಾಗಿ ದೂರು ನೀಡಲ್ಲ. ರಾತ್ರಿ 10 ಗಂಟೆ ಸಮಯದಲ್ಲಿ ಪೊಲೀಸರು ಬೀಟ್ಸ್ ಹಾಕಿ ಮತ್ತೆ ಬರುವುದಿಲ್ಲ. ಕಳ್ಳರಿಗೆ ಪೊಲೀಸರ ಭಯವಿಲ್ಲ. ಅದಕ್ಕಾಗಿ ರಾತ್ರಿ ವೇಳೆ ಹಳ್ಳಿ ಜನರ ಮೇಲೆ ಕಳ್ಳರ ಕೈಚಳಕ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

6 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

6 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

6 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

6 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

6 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

9 hours ago