ಮೈಸೂರು ನಗರ

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಪ್ರತಿ ದಿನವೂ ಕಳ್ಳತನ ನಡೆಯುತ್ತಿದ್ದು, ಖದೀಮರು ರೋಗಿಯ ಸಂಬಂಧಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ.

ಆಸ್ಪತ್ರೆ ಹೊರಗಡೆ ಮಲಗಿರುವಾಗ ಮೊಬೈಲ್, ಹಣ ಕಳ್ಳತನವಾಗುತ್ತಿದ್ದು, ನಿನ್ನೆ ಮಲಗಿದ್ದ ವ್ಯಕ್ತಿಯ ಬಳಿ ಇದ್ದ 9 ಸಾವಿರ ಹಣ ಹಾಗೂ ಒಂದು ಮೊಬೈಲ್‌ ಕಳುವಾಗಿದೆ.

ಎರಡು ದಿನದ ಹಿಂದೆ ಕಳ್ಳನೋರ್ವ ಹಣ ಎಗರಿಸಿ ಹೋಗುವಾಗ ವ್ಯಕ್ತಿಯು ಕೂಗಿಕೊಂಡಿದ್ದಾನೆ. ಈ ವೇಳೆ ಕಳ್ಳನನ್ನು ಹಿಡಿಯಲು ಹೋದ ಅಕ್ಕಪಕ್ಕದಲ್ಲಿದ್ದವರಿಗೆ ದೊಡ್ಡದಾದ ಚಾಕು ತೋರಿಸಿ ಕಳ್ಳ ಪರಾರಿಯಾಗಿದ್ದಾನೆ. ಈ ವೇಳೆ ಚಾಕು ಕಂಡು ಭಯಗೊಂಡ ಜನರು ವಾಪಸ್ ಆಸ್ಪತ್ರೆ ಬಳಿ ಓಡಿ ಬಂದಿದ್ದಾರೆ.

ಸೆಕ್ಯೂರಿಟಿ ಇಲ್ಲದ ಚಲುವಾಂಬ ಆಸ್ಪತ್ರೆಯಲ್ಲಿ ರೋಗಿಯ ಸಂಬಂಧಿಕರಿಗೆ ಕಳ್ಳರ ಕಾಟ ಹೆಚ್ಚಾಗಿದೆ. ಎಲ್ಲಿ ದೂರು ಕೊಡಬೇಕೋ ಗೊತ್ತಿಲ್ಲ, ಅದಕ್ಕಾಗಿ ದೂರು ನೀಡಲ್ಲ. ರಾತ್ರಿ 10 ಗಂಟೆ ಸಮಯದಲ್ಲಿ ಪೊಲೀಸರು ಬೀಟ್ಸ್ ಹಾಕಿ ಮತ್ತೆ ಬರುವುದಿಲ್ಲ. ಕಳ್ಳರಿಗೆ ಪೊಲೀಸರ ಭಯವಿಲ್ಲ. ಅದಕ್ಕಾಗಿ ರಾತ್ರಿ ವೇಳೆ ಹಳ್ಳಿ ಜನರ ಮೇಲೆ ಕಳ್ಳರ ಕೈಚಳಕ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

7 mins ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

18 mins ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

57 mins ago

ಬೆಂಗಳೂರಿನ ಶ್ವಾಸತಾಣಗಳ ಸಂರಕ್ಷಣೆ, ಸಂವರ್ಧನೆಗೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ…

1 hour ago

ಹನೂರು: ಪಿ.ಜಿ.ಪಾಳ್ಯ ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫುಲ್‌ ಖುಷ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…

2 hours ago

ಪಹಲ್ಗಾಮ್‌ ಮಾದರಿ ದಾಳಿ: ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ…

2 hours ago