ಮೈಸೂರು ನಗರ

ಇದು ಕರ್ನಾಟಕಕ್ಕೆ ವಿರುದ್ಧವಾದ ಬಜೆಟ್:‌ ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿನ ಕೇಂದ್ರ ಬಜೆಟ್‌ ದೂರದೃಷ್ಟಿ ಇಲ್ಲದ, ದೇಶದ ಹಿತದೃಷ್ಟಿಯಿಂದ ಕರ್ನಾಟಕದ ಹಿತದೃಷ್ಟಿಯಿಂದ ಬಹಳ ನಿರಾಶದಾಯಕ ಬಜೆಟ್‌ ಆಗಿದೆ ಎಂದು ಟೀಕೆ ಮಾಡಿದ್ದಾರೆ.

ಈ ಬಾರಿಯ ಬಜೆಟ್‌ ಹೈಲೈಟ್ಸ್‌ಗಳನ್ನು ಗಮನಿಸಿದ್ದೇನೆ. ಇದೊಂದು ನಿರಾಶದಾಯಕ ಬಜೆಟ್.‌ ಬಜೆಟ್‌ಗೂ ಮೊದಲೇ ಪೂರ್ವಭಾವಿ ಸಭೆಗೆ ಕರೆದಿದ್ದರು. ರಾಜ್ಯದಿಂದ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದರು. ನಾವು ರಾಜ್ಯದಿಂದ ಹಲವು ಬೇಡಿಕೆ ಇಟ್ಟಿದ್ದೆವು. ಆದರೆ ನಮ್ಮ ಬೇಡಿಕೆಗಳು ಕೇವಲ ಬೇಡಿಕೆಗಳಾಗಿವೆ. ಬಜೆಟ್‌ನಲ್ಲಿ ಒಂದೇ ಒಂದು ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು 50 ಲಕ್ಷದ 65 ಸಾವಿರದ 345 ಕೋಟಿ ರೂ ಬಜೆಟ್‌ ಮಂಡಿಸಿದ್ದು, ಅದರಲ್ಲಿ ಕರ್ನಾಟಕಕ್ಕೆ ಏನೂ ಇಲ್ಲ ಎಂದು ಕಿಡಿಕಾರಿದರು.

ಇನ್ನು ಹೆಚ್ಚು ತೆರಿಗೆ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ನಂ.2 ಆಗಿದೆ. ಆದರೆ ನಮ್ಮ ರಾಜ್ಯವನ್ನು ಬಿಟ್ಟು ಬಿಹಾರ ಹಾಗೂ ಆಂಧ್ರಪ್ರದೇಶದಕ್ಕೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಕಿಡಿಕಾರಿದರು.

ಒಟ್ಟಾರೆಯಾಗಿ ಈ ಬಜೆಟ್‌ ಅತ್ಯಂತ ನಿರಾಶದಾಯಕ. ಕರ್ನಾಟಕಕ್ಕೆ ವಿರುದ್ಧವಾಗಿರುವ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದುವರೆಗೂ ಬಜೆಟ್‌ನಲ್ಲಿ ನಮಗೆ ಘೋಷಣೆ ಮಾಡಿ ಚೊಂಬು ನೀಡಿದ್ರು. ಅದೇ ರೀತಿ ಈಗ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೂ ಚೊಂಬು ಕೊಡ್ತಾರೆ ಎಂದು ಲೇವಡಿ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago