ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿನ ಕೇಂದ್ರ ಬಜೆಟ್ ದೂರದೃಷ್ಟಿ ಇಲ್ಲದ, ದೇಶದ ಹಿತದೃಷ್ಟಿಯಿಂದ ಕರ್ನಾಟಕದ ಹಿತದೃಷ್ಟಿಯಿಂದ ಬಹಳ ನಿರಾಶದಾಯಕ ಬಜೆಟ್ ಆಗಿದೆ ಎಂದು ಟೀಕೆ ಮಾಡಿದ್ದಾರೆ.
ಈ ಬಾರಿಯ ಬಜೆಟ್ ಹೈಲೈಟ್ಸ್ಗಳನ್ನು ಗಮನಿಸಿದ್ದೇನೆ. ಇದೊಂದು ನಿರಾಶದಾಯಕ ಬಜೆಟ್. ಬಜೆಟ್ಗೂ ಮೊದಲೇ ಪೂರ್ವಭಾವಿ ಸಭೆಗೆ ಕರೆದಿದ್ದರು. ರಾಜ್ಯದಿಂದ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದರು. ನಾವು ರಾಜ್ಯದಿಂದ ಹಲವು ಬೇಡಿಕೆ ಇಟ್ಟಿದ್ದೆವು. ಆದರೆ ನಮ್ಮ ಬೇಡಿಕೆಗಳು ಕೇವಲ ಬೇಡಿಕೆಗಳಾಗಿವೆ. ಬಜೆಟ್ನಲ್ಲಿ ಒಂದೇ ಒಂದು ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು 50 ಲಕ್ಷದ 65 ಸಾವಿರದ 345 ಕೋಟಿ ರೂ ಬಜೆಟ್ ಮಂಡಿಸಿದ್ದು, ಅದರಲ್ಲಿ ಕರ್ನಾಟಕಕ್ಕೆ ಏನೂ ಇಲ್ಲ ಎಂದು ಕಿಡಿಕಾರಿದರು.
ಇನ್ನು ಹೆಚ್ಚು ತೆರಿಗೆ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ನಂ.2 ಆಗಿದೆ. ಆದರೆ ನಮ್ಮ ರಾಜ್ಯವನ್ನು ಬಿಟ್ಟು ಬಿಹಾರ ಹಾಗೂ ಆಂಧ್ರಪ್ರದೇಶದಕ್ಕೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಕಿಡಿಕಾರಿದರು.
ಒಟ್ಟಾರೆಯಾಗಿ ಈ ಬಜೆಟ್ ಅತ್ಯಂತ ನಿರಾಶದಾಯಕ. ಕರ್ನಾಟಕಕ್ಕೆ ವಿರುದ್ಧವಾಗಿರುವ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದುವರೆಗೂ ಬಜೆಟ್ನಲ್ಲಿ ನಮಗೆ ಘೋಷಣೆ ಮಾಡಿ ಚೊಂಬು ನೀಡಿದ್ರು. ಅದೇ ರೀತಿ ಈಗ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೂ ಚೊಂಬು ಕೊಡ್ತಾರೆ ಎಂದು ಲೇವಡಿ ಮಾಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…