cm siddaramiha
ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಐಟಿ ತನಿಖೆಯನು ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಧರ್ಮಸ್ಥಳದ ಅನುಮಾನ ತೂಗುಕತ್ತಿಯಿಂದ ಹೊರ ಹೋಗಲಿ ಎಂದು ಎಸ್ಐಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರ್ಯಾಲಿ ಮಾಡುತ್ತಿದ್ದಾರೆ. ಆದರೆ ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ. ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮ ಯಾತ್ರೆ ಮಾಡ್ತಾರೆ. ಅದೇ ರಾಜ್ಯಕ್ಕೆ ಅನ್ಯಾಯ ಆಗಿದೆ. ಈ ಬಗ್ಗೆ ಕೇಂದ್ರದಲ್ಲಿ ಅನುದಾನದ ಬಗ್ಗೆ ಮಾತೆ ಎತ್ತಲ್ಲ ಎಂದು ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ ಇದ್ದಾಗ ಸಿಬಿಐಗೆ ಒಂದು ಪ್ರಕರಣ ಕೂಡ ಕೊಟ್ಟಿಲ್ಲ. ಈಗ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಕೊಡಿ ಅಂತೆಲ್ಲ ಹೇಳುತ್ತಾರೆ. ಎಸ್ಐಟಿಗೆ ನಾನು ಸಮಯ ನಿಗದಿ ಮಾಡಿಲ್ಲ. ತನಿಖೆ ಮಾಡಿ ವರದಿ ಕೊಡಿ ಎಂದು ಹೇಳಿದ್ದೇನೆ. ತನಿಖೆಗೆ ಯಾವುದೇ ಹಸ್ತಕ್ಷೇಪ ಇಲ್ಲ. ಜನರಿಗೆ ಸತ್ಯ ಗೊತ್ತಾಗಬೇಕು. ಬೇರೆ ತನಿಖೆ ಸದ್ಯಕ್ಕೆ ಅವಶ್ಯಕತೆ ಇಲ್ಲ ಅನಿಸುತ್ತದೆ ಎಂದು ಹೇಳಿದರು.
ಇನ್ನು ಆಸ್ತಿ ಮುದ್ರಾಂಕ ಶುಲ್ಕ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಕಡಿಮೆಯಿದೆ ಎಂದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…