ಮೈಸೂರು ನಗರ

ಬಿಜೆಪಿ-ಜೆಡಿಎಸ್ ಧರ್ಮಸ್ಥಳ ಚಲೋ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.!

ಮೈಸೂರು: ಬಿಜೆಪಿ ಹಾಗೂ ಜೆಡಿಎಸ್‌ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯನು ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಧರ್ಮಸ್ಥಳದ ಅನುಮಾನ ತೂಗುಕತ್ತಿಯಿಂದ ಹೊರ ಹೋಗಲಿ ಎಂದು ಎಸ್ಐಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರ್ಯಾಲಿ ಮಾಡುತ್ತಿದ್ದಾರೆ. ಆದರೆ ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ. ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮ ಯಾತ್ರೆ ಮಾಡ್ತಾರೆ. ಅದೇ ರಾಜ್ಯಕ್ಕೆ ಅನ್ಯಾಯ ಆಗಿದೆ. ಈ ಬಗ್ಗೆ ಕೇಂದ್ರದಲ್ಲಿ ಅನುದಾನದ ಬಗ್ಗೆ ಮಾತೆ ಎತ್ತಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ಇದ್ದಾಗ ಸಿಬಿಐಗೆ ಒಂದು ಪ್ರಕರಣ ಕೂಡ ಕೊಟ್ಟಿಲ್ಲ. ಈಗ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಕೊಡಿ ಅಂತೆಲ್ಲ ಹೇಳುತ್ತಾರೆ. ಎಸ್‌ಐಟಿಗೆ ನಾನು ಸಮಯ ನಿಗದಿ ಮಾಡಿಲ್ಲ. ತನಿಖೆ ಮಾಡಿ ವರದಿ ಕೊಡಿ ಎಂದು ಹೇಳಿದ್ದೇನೆ. ತನಿಖೆಗೆ ಯಾವುದೇ ಹಸ್ತಕ್ಷೇಪ ಇಲ್ಲ. ಜನರಿಗೆ ಸತ್ಯ ಗೊತ್ತಾಗಬೇಕು. ಬೇರೆ ತನಿಖೆ ಸದ್ಯಕ್ಕೆ ಅವಶ್ಯಕತೆ ಇಲ್ಲ ಅನಿಸುತ್ತದೆ ಎಂದು ಹೇಳಿದರು.

ಇನ್ನು ಆಸ್ತಿ ಮುದ್ರಾಂಕ ಶುಲ್ಕ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಕಡಿಮೆಯಿದೆ ಎಂದರು.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

5 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

5 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

5 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

7 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

8 hours ago