ಮೈಸೂರು ನಗರ

ಈ ಬಾರಿಯೂ ಸಿದ್ದರಾಮಯ್ಯ ಅವರೇ ದಸರಾ ಉದ್ಘಾಟನೆ ಮಾಡುತ್ತಾರೆ: ಸಚಿವ ಮಹದೇವಪ್ಪ ಸ್ಪಷ್ಟನೆ

ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಅವರೇ ದಸರಾ ಮಾಡ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಕಾಂಗ್ರೆಸ್ ಬಗ್ಗೆ ಆಗಲಿ ಸಿಎಂ ಬಗ್ಗೆ ಆಗಲಿ ಬಿಜೆಪಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಇನ್ನು ಸೆಪ್ಟೆಂಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗುತ್ತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾವ ಕ್ರಾಂತಿಯೂ ಆಗಲ್ಲ. ಸಂಕ್ರಾಂತಿ ಎಲ್ಲರೂ ಚೆನ್ನಾಗಿ ಆಚರಣೆ ಮಾಡ್ತಾರೆ ಎಂದು ಮಾಧ್ಯಮಗಳ ಕಾಲೆಳೆದರು. ಇರೋದು ಒಂದೇ ಸಿಎಂ ಖುರ್ಚಿ. ಒಬ್ಬರೇ ಸಿಎಂ ಆಗೋಕೆ ಸಾಧ್ಯ. ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿದೆ. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಿಎಂ ಬದಲಾಗುತ್ತಾರೆ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರು ಯಾವ ಅರ್ಥದಲ್ಲಿ ಹೇಳುತ್ತಿದ್ದಾರೆ ನನಗೆ ಗೊತ್ತಿಲ್ಲ. ನಾನು ಹೈಕಮಾಂಡ್ ಸಭೆಯಲ್ಲಿ ಇರಲಿಲ್ಲ. ಒಂದು ವೇಳೆ ಒಪ್ಪಂದ ಆಗಿದ್ರೆ ಅದು ನಮಗೆ ಗೊತ್ತಿಲ್ಲ. ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

ಇನ್ನು ಚಾಮರಾಜನಗರದಲ್ಲಿ ಈ ಬಾರಿ ದಸರಾ ಆಚರಣೆ ಇಲ್ಲ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೈಸೂರಿನ ದಸರಾವನ್ನು ಎಲ್ಲರೂ ನೋಡಲಿ ಇಲ್ಲಿನ ದಸರಾದ ಮಹತ್ವ ಕಡಿಮೆ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಮಾಡಿದ್ದಾರೆ. ದಸರಾ ಅಂದ್ರೆ ಅದು ಮೈಸೂರು. ಹಾಗಾಗಿ ಈ ಬಾರಿ ಈ ನಿರ್ಧಾರ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

17 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

22 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago