ಮೈಸೂರು ನಗರ

ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಸಿಎಂ ಕುರ್ಚಿಯ ಬಗ್ಗೆ ಅಗ್ರಿಮೆಂಟ್ ಆಗಿರೋದು ಖಚಿತ. ಅದಕ್ಕಾಗಿ ಕುರ್ಚಿ ಉಳಿಸಿಕೊಳ್ಳಲು ಇದೆಲ್ಲ ಟ್ರಯಲ್ ನಡೆಯುತ್ತಿದೆ. ಒಟ್ಟಾರೆ ಕಾಂಗ್ರೆಸ್ ಒಡೆದ ಮನೆಯಾಗಿದೆ. ಚೇರ್ ಉಳಿಸಿಕೊಳ್ಳಲು ಸಿಎಂ ಆ ರೀತಿ ಮಾತನಾಡುತ್ತಿದ್ದಾರೆ. ಈ ಬಾರಿ ಹೊಸ ಸಿಎಂ ದಸರಾ ಮಾಡುತ್ತಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಇನ್ನು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ತುರ್ತು ಪರಿಸ್ಥಿತಿಯ ಪರವೋ ಅಥವಾ ವಿರೋಧವೂ ಎಂಬುದನ್ನು ತಿಳಿಸಲಿ. ತುರ್ತು ಪರಿಸ್ಥಿತಿಯಲ್ಲಿ ಅಮಾಯಕ ದೇಶ ಪ್ರೇಮಿಗಳು ಸತ್ತಿದ್ದೇಕೆ? ಲಾಟಿ ಚಾರ್ಜ್ ಮಾಡಿದ್ದೇಕೆ ಎಂಬುದಕ್ಕೆ ಕಾಂಗ್ರೆಸ್ ಉತ್ತರವನ್ನೇ ಕೊಟ್ಟಿಲ್ಲ. ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಆಗಿಲ್ಲ. ಈ ವಿಚಾರ ಮುಚ್ಚಿಡುವ ಮೂಲಕ ಕಳ್ಳಾಟ ಮಾಡುತ್ತಿದೆ. ಆ ವೇಳೆ ನಾನು ಕೂಡ ಬಂಧನವಾಗಿದ್ದೆ. ನಾನು ಕಾಲೇಜ್ ಸ್ಟೂಡೆಂಟ್ ಆಗಿದ್ದೆ ನನ್ನನ್ನೇಕೆ ಅರೆಸ್ಟ್ ಮಾಡಿದ್ದರು ಎಂಬುದನ್ನು ಹೇಳಿರಿ. ಅಘೋಷಿತ ತುರ್ತು ಎಂದರೆ ನಾವೇನು ಚುನಾವಣೆಗೆ ನಿಲ್ಲಬೇಡ ಎಂದು ತಡೆದಿದ್ದೇವಾ. ಬೇರೆ ಬೇರೆ ದೇಶಕ್ಕೆ ಹೋಗಿ ಭಾರತದ ಬಗ್ಗೆ ಮಾತನಾಡುತ್ತೀರಿ. ನಿಮ್ಮನ್ನು ಮೋದಿ ತಡೆದಿದ್ದಾರಾ.? ಅಂದು ಪತ್ರಿಕೆಯ ಕಂಟೆಂಟ್ ಬಗ್ಗೆ ಇಂದಿರಾಗಾಂಧಿ ತೀರ್ಮಾನ ಮಾಡ್ತಿದ್ರು. ಆದರೆ ಇಂದು ಮೋದಿ ಆ ರೀತಿ ನಡೆದುಕೊಳ್ಳುತ್ತಿದ್ದಾರಾ? ಎಂದು ಕಾಂಗ್ರೆಸ್‌ ನಾಯಕರಿಗೆ ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

29 seconds ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

18 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

27 mins ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

9 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

12 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

13 hours ago