ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ನಲ್ಲಿ ಸಿಎಂ ಬದಲಾವಣೆ ಖಚಿತ. ಸಿಎಂ ಕುರ್ಚಿಯ ಬಗ್ಗೆ ಅಗ್ರಿಮೆಂಟ್ ಆಗಿರೋದು ಖಚಿತ. ಅದಕ್ಕಾಗಿ ಕುರ್ಚಿ ಉಳಿಸಿಕೊಳ್ಳಲು ಇದೆಲ್ಲ ಟ್ರಯಲ್ ನಡೆಯುತ್ತಿದೆ. ಒಟ್ಟಾರೆ ಕಾಂಗ್ರೆಸ್ ಒಡೆದ ಮನೆಯಾಗಿದೆ. ಚೇರ್ ಉಳಿಸಿಕೊಳ್ಳಲು ಸಿಎಂ ಆ ರೀತಿ ಮಾತನಾಡುತ್ತಿದ್ದಾರೆ. ಈ ಬಾರಿ ಹೊಸ ಸಿಎಂ ದಸರಾ ಮಾಡುತ್ತಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಇನ್ನು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ತುರ್ತು ಪರಿಸ್ಥಿತಿಯ ಪರವೋ ಅಥವಾ ವಿರೋಧವೂ ಎಂಬುದನ್ನು ತಿಳಿಸಲಿ. ತುರ್ತು ಪರಿಸ್ಥಿತಿಯಲ್ಲಿ ಅಮಾಯಕ ದೇಶ ಪ್ರೇಮಿಗಳು ಸತ್ತಿದ್ದೇಕೆ? ಲಾಟಿ ಚಾರ್ಜ್ ಮಾಡಿದ್ದೇಕೆ ಎಂಬುದಕ್ಕೆ ಕಾಂಗ್ರೆಸ್ ಉತ್ತರವನ್ನೇ ಕೊಟ್ಟಿಲ್ಲ. ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಆಗಿಲ್ಲ. ಈ ವಿಚಾರ ಮುಚ್ಚಿಡುವ ಮೂಲಕ ಕಳ್ಳಾಟ ಮಾಡುತ್ತಿದೆ. ಆ ವೇಳೆ ನಾನು ಕೂಡ ಬಂಧನವಾಗಿದ್ದೆ. ನಾನು ಕಾಲೇಜ್ ಸ್ಟೂಡೆಂಟ್ ಆಗಿದ್ದೆ ನನ್ನನ್ನೇಕೆ ಅರೆಸ್ಟ್ ಮಾಡಿದ್ದರು ಎಂಬುದನ್ನು ಹೇಳಿರಿ. ಅಘೋಷಿತ ತುರ್ತು ಎಂದರೆ ನಾವೇನು ಚುನಾವಣೆಗೆ ನಿಲ್ಲಬೇಡ ಎಂದು ತಡೆದಿದ್ದೇವಾ. ಬೇರೆ ಬೇರೆ ದೇಶಕ್ಕೆ ಹೋಗಿ ಭಾರತದ ಬಗ್ಗೆ ಮಾತನಾಡುತ್ತೀರಿ. ನಿಮ್ಮನ್ನು ಮೋದಿ ತಡೆದಿದ್ದಾರಾ.? ಅಂದು ಪತ್ರಿಕೆಯ ಕಂಟೆಂಟ್ ಬಗ್ಗೆ ಇಂದಿರಾಗಾಂಧಿ ತೀರ್ಮಾನ ಮಾಡ್ತಿದ್ರು. ಆದರೆ ಇಂದು ಮೋದಿ ಆ ರೀತಿ ನಡೆದುಕೊಳ್ಳುತ್ತಿದ್ದಾರಾ? ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…