ಮೈಸೂರು ನಗರ

ಬಡತನ, ಹಸಿವಿನ ಸಂಕಟ ಗೊತ್ತಿಲ್ಲದವರು ಗ್ಯಾರಂಟಿ ನಿಂದಕರು: ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್‌

ಮೈಸೂರು: ಬಡತನ, ಹಸಿವಿನ ಸಂಕಟ ಗೊತ್ತಿಲ್ಲದವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್‌ ತಿಳಿಸಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು (ಜ.29) ಆಯೋಜಿಸಿದ್ದ ಸಿಂಧುವಳ್ಳಿ ಸುಧೀರ ಅವರು ರಚಿಸಿರುವ “ಭಾಗ್ಯವಿಧಾತ” ಪುಸ್ತಕವನ್ನು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್‌ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಹಿರಿಯ ಪತ್ರಕರ್ತ ಕೆ.ದೀಪಕ್‌ ಮಾತನಾಡುತ್ತಾ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಆರಂಭದಲ್ಲೆ ʼಅನ್ನಭಾಗ್ಯʼ ಯೋಜನೆ ಘೋಷಿಸಿದರು. ಆದರೆ ಹಸಿವಿನ ಪದದ ಅರ್ಥವೇ ತಿಳಿಯದವರು, ಶತಮಾನಗಳಿಂದ ಮೃಷ್ಠಾನ ಭೋಜನ ಉಂಡವರು ಇದನ್ನು ಟೀಕಿಸಿದರು.

ರಾಜ್ಯದ ಜನರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರು. ಆದರೆ ಈ ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಯನ್ನು ಸೋಮಾರಿ ಮಾಡಿ ಕೂರಿಸಿದೆ ಎಂದು ವಿರೋಧ ಪಕ್ಷದವರು ಟೀಕಿಸುತ್ತಾರೆ. ಅವರಿಗೆ ರಾಜ್ಯದ ಜನತೆ ಅಭಿವೃದ್ದಿಯಾಗುವುದು ಇಷ್ಟವಿಲ್ಲ ಎಂದು ಟೀಕಿಸಿದರು.

ಸಮಾಜದ ಒಂದು ವರ್ಗದ ಜನರಿಗೆ ಬಡತನ ನಿರ್ಮೂಲನೆಗಿಂತ ಬಡವರನ್ನೇ ನಿರ್ಮೂಲನೆ ಮಾಡುವ ಉದ್ದೇಶವಿದೆ. ಅದಕ್ಕಾಗಿಯೇ ಬಡವರಿಗೆ ಆರ್ಥಿಕಾವಾಗಿ ನೆರವಾಗುವ ಯಾವುದೇ ಯೋಜನೆಗಳನ್ನು ಅವರು ಸಹಿಸುವುದಿಲ್ಲ. ಆದರೆ ಸಿದ್ದರಾಮಯ್ಯ ಅವರು ಸಮಾಜವಾದದ ಹಿನ್ನಲೆಯಿಂದ ಬಂದಿರುವ ಕಾರಣ ಈ ವಿಷಯದಲ್ಲಿ ಅವರನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago