ಮೈಸೂರು: ಇಂದು ಮುಂಜಾನೆ ಚಳಿ, ಮಳೆಯನ್ನು ಲೆಕ್ಕಿಸದೇ ಮೈಸೂರಿನ ಸ್ವಚ್ಚತೆಗಾಗಿ ಫಿಟ್ ಮೈಸೂರು ಸಾಮೂಹಿಕ ಆರೋಗ್ಯ ಮತ್ತು ಜಾಗೃತಿ ನಡಿಗೆ ಯಲ್ಲಿ ಮೈಸೂರಿನ ಸಾವಿರಾರು ಮಂದಿ ಹೆಜ್ಜೆ ಹಾಕಿ ಸ್ವಚ್ಚತೆಯ ಮಹತ್ವ ಸಾರಿದರು.
ಮೈಸೂರು ವಿಶ್ವವಿದ್ಯಾನಿಲಯ, ನಗರಪಾಲಿಕೆ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಮೈಸೂರು ಜಿಮ್ ಅಸೋಸಿಯೇಷನ್, ಜಿಎಸ್ಎಸ್, ಸಿಎಸ್ಆರ್ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ೫ ಕಿಲೋ ಮೀಟರ್ ದೂರದ ಫಿಟ್ ಮೈಸೂರು ಸಾಮೂಹಿಕ ಆರೋಗ್ಯ ಮತ್ತು ಜಾಗೃತಿ ನಡಿಗೆಗಾಗಿ ಮೈಸೂರಿನ ಹಿರಿಯರು ಮತ್ತು ಕಿರಿಯರು ಸೇರಿದಂತೆ ಎಲ್ಲಾ ವಯೋಮಾನದವರು ಹೆಜ್ಜೆ ಹಾಕಿದರು.
ಮುಂಜಾನೆ ೫ ಗಂಟೆಯಿಂದಲೇ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರಕ್ಕೆ ಆಗಮಿಸಿದ್ದ ಜನರು ನೋಂದಣಿ ಮಾಡಿಸಿ, ಬಿಳಿ ಟೀ ಶರ್ಟ್ ಮತ್ತು ಟೋಪಿ ಧರಿಸಿಕೊಂಡು ಶಿಸ್ತಿನ ಸಿಪಾಯಿಗಳಂತೆ ಸ್ವಚ್ಚತೆ ನಡಿಗೆಗೆ ಸನ್ನದ್ಧರಾದರು.
೬.೩೦ಕ್ಕೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಪರ್ವತಾರೋಹಿ ಡಾ.ಉಷಾ ಹೆಗಡೆ ಹಸಿರು ನಿಶಾನೆ ತೋರಿಸುವ ಮೂಲಕ ಜಾಗೃತಿ ನಡಿಗೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ಸಂಸದ ಸುನೀಲ್ ಬೋಸ್, ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್, ಸಿ.ಎನ್.ಮಂಜೇಗೌಡ, ಮೈಸೂರು ವಿವಿ ಕುಲಪತಿ ಎನ್.ಕೆ.ಲೋಕನಾಥ್, ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಮತ್ತಿತರರು ಭಾಗವಹಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…