ಮೈಸೂರು: ಇಲ್ಲಿನ ವಿಜಯನಗರ ಠಾಣೆಯಲ್ಲಿ ಕೌಟುಂಬಿಕ ಸಮಸ್ಯೆ ಕಾರಣದಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಜೆಸ್ಸಿ ಆಂಟೋನಿ, ಅವರ ಸಹೋದರ ಜೋಬಿ ಆಂಟೋನಿ ಹಾಗೂ ಜೋಬಿ ಪತ್ನಿ ಶರ್ಮಿಳಾ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ.
ಜೆಸ್ಸಿ ಆಂಟೋನಿಯ ಮೃತದೇಹ ರಮ್ಮನಹಳ್ಳಿಯಲ್ಲಿ ಕಳೆದ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಆತ್ಮಹತ್ಯೆಗೆ ಮಾಡಿಕೊಳ್ಳುವುದಕ್ಕಿಂತಲೂ ಮೊದಲು ಜೆಸ್ಸಿ ಆಂಟೋನಿ ಮೊಬೈಲ್ ಫೋನ್ನಲ್ಲಿ ಮಾಡಿದ್ದ ವಿಡಿಯೋದಲ್ಲಿ ಜೋಬಿಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ತಂಗಿ ಹಾಗೂ ಆಕೆಯ ಮಗುವನ್ನು ಕೊಲ್ಲಲು ಅವರು ಪ್ರೇರೇಪಿಸಿದ್ದಾರೆ ಎಂದು ಆರೋಪ ಮಾಡಿದ್ದರು.
ಈ ಮಧ್ಯೆ ಜೋಬಿ ಆಂಟೋನಿ ಹಾಗೂ ಅವರ ಪತ್ನಿ ಶರ್ಮಿಳಾ ಮೃತದೇಹಗಳು ವಿಜಯನಗರದ ಸಾರ್ವಜನಿಕ ಕ್ರೀಡಾಂಗಣದ ನೀರಿನ ಟ್ಯಾಂಕ್ನ ಏಣಿಯಲ್ಲಿ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಪೊಲೀಸರು ತನಿಖೆ ಶುರುಮಾಡಿದ್ದಾರೆ.
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…