ಮೈಸೂರು: ಸ್ಪೀಕರ್ ಮೇಲೆ ಪೇಪರ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, 40 ವರ್ಷಗಳ ರಾಜಕೀಯ ಜೀವನದಲ್ಲಿ ಈ ದೃಶ್ಯ ನೋಡಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನಡೆಯುವ ಚರ್ಚೆಗಳು ಗುಣಾತ್ಮಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾಗಿರಬೇಕು. ಆದರೆ ನಿನ್ನೆ ವಿಪಕ್ಷ ನಾಯಕರು ಸದನದಲ್ಲಿ ನಡೆದುಕೊಂಡ ರೀತಿ ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ವಿರೋಧ ಪಕ್ಷದ 18 ಮಂದಿ ಶಾಸಕರನ್ನು ಅಮಾನತು ಮಾಡಿರುವುದು ಸರಿಯಾಗಿದೆ. ಸ್ಪೀಕರ್ ಅವರು ವಿವೇಚನೆಯಿಂದಲೇ ಈ ಕ್ರಮ ಕೈಗೊಂಡಿದ್ದಾರೆ ಎಂದರು.
ಇನ್ನು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಯಾಗಿರುವ ಹನಿಟ್ರ್ಯಾಪ್ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ತನಿಖೆಯ ಬಗ್ಗೆ ಈಗಾಗಲೇ ಸಿಎಂ ಹಾಗೂ ಗೃಹ ಸಚಿವರು ಹೇಳಿದ್ದಾರೆ. ತನಿಖೆ ನಡೆದ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ. ತನಿಖೆ ಬಳಿಕ ಆರೋಪಿಗಳು ಯಾರೆಂದು ಗೊತ್ತಾಗುತ್ತದೆ. ಸುಮ್ಮನೆ ಊಹಾಪೋಹ ಬೇಡ ಎಂದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…