ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಹುಲಿ ಸಂಚರಿಸಿರುವ ಸುಳಿವು ಹಾಗೂ ಹೆಜ್ಜೆಗಳು ಕಂಡು ಬರಲಿಲ್ಲ. ಆದರೆ, ತೋಟದ ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಹುಲಿ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ಅದನ್ನು ಕಂಡ ಅರಣ್ಯಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಎರಡನೇ ದಿನ ಕಾರ್ಯಾಚರಣೆ
ಹುಲಿ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಮರಟಿಕ್ಯಾತನ ಹಳ್ಳಿ, ಗೋಹಳ್ಳಿ, ಚಿಕ್ಕಿರೆ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಿ ಥರ್ಮಲ್ ಡ್ರೋನ್ ಮೂಲಕ ಹುಲಿ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.
ಕಣಿಯನಹುಂಡಿ ಬಳಿ ಕಾಣಿಸಿಕೊಂಡಿದ್ದು ಇದೇ ಹುಲಿನಾ?
ಜ.30 ರಂದು ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಹುಲಿ ಮರಟಿಕ್ಯಾತನಹಳ್ಳಿ, ಜಟ್ಟಿಹುಂಡಿ ಬಳಿ ಕಾಣಿಸಿಕೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಆದರೆ, ಮಂಗಳವಾರ ಬೆಳಿಗ್ಗೆ ಕಾಣಿಸಿಕೊಂಡ ಹುಲಿ ಯಾವುದು ಎಂದು ಪತ್ತೆ ಮಾಡಲು ಅರಣ್ಯ ಸಿಬ್ಬಂದಿ ಎರಡನೇ ದಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಡಿಸಿಎಫ್ ಕೆ.ಪರಮೇಶ್, ಎಸಿಎಫ್ ರವೀಂದ್ರ ಆರ್ಎಫ್ಒ ಸಂತೋಷ್ ಹೂಗಾರ್, ಡಿಆರ್ಎಫ್ಒ ಸತೀಶ್ ಸೇರಿದಂತೆ 20ಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…