ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಹುಲಿ ಸಂಚರಿಸಿರುವ ಸುಳಿವು ಹಾಗೂ ಹೆಜ್ಜೆಗಳು ಕಂಡು ಬರಲಿಲ್ಲ. ಆದರೆ, ತೋಟದ ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಹುಲಿ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ಅದನ್ನು ಕಂಡ ಅರಣ್ಯಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಎರಡನೇ ದಿನ ಕಾರ್ಯಾಚರಣೆ
ಹುಲಿ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಮರಟಿಕ್ಯಾತನ ಹಳ್ಳಿ, ಗೋಹಳ್ಳಿ, ಚಿಕ್ಕಿರೆ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಿ ಥರ್ಮಲ್ ಡ್ರೋನ್ ಮೂಲಕ ಹುಲಿ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.
ಕಣಿಯನಹುಂಡಿ ಬಳಿ ಕಾಣಿಸಿಕೊಂಡಿದ್ದು ಇದೇ ಹುಲಿನಾ?
ಜ.30 ರಂದು ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಹುಲಿ ಮರಟಿಕ್ಯಾತನಹಳ್ಳಿ, ಜಟ್ಟಿಹುಂಡಿ ಬಳಿ ಕಾಣಿಸಿಕೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಆದರೆ, ಮಂಗಳವಾರ ಬೆಳಿಗ್ಗೆ ಕಾಣಿಸಿಕೊಂಡ ಹುಲಿ ಯಾವುದು ಎಂದು ಪತ್ತೆ ಮಾಡಲು ಅರಣ್ಯ ಸಿಬ್ಬಂದಿ ಎರಡನೇ ದಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಡಿಸಿಎಫ್ ಕೆ.ಪರಮೇಶ್, ಎಸಿಎಫ್ ರವೀಂದ್ರ ಆರ್ಎಫ್ಒ ಸಂತೋಷ್ ಹೂಗಾರ್, ಡಿಆರ್ಎಫ್ಒ ಸತೀಶ್ ಸೇರಿದಂತೆ 20ಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…