ಮೈಸೂರು ನಗರ

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಹುಲಿ ಸಂಚರಿಸಿರುವ ಸುಳಿವು ಹಾಗೂ ಹೆಜ್ಜೆಗಳು ಕಂಡು ಬರಲಿಲ್ಲ. ಆದರೆ, ತೋಟದ ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಹುಲಿ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ಅದನ್ನು ಕಂಡ ಅರಣ್ಯಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಎರಡನೇ ದಿನ ಕಾರ್ಯಾಚರಣೆ
ಹುಲಿ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಮರಟಿಕ್ಯಾತನ ಹಳ್ಳಿ, ಗೋಹಳ್ಳಿ, ಚಿಕ್ಕಿರೆ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಿ ಥರ್ಮಲ್ ಡ್ರೋನ್ ಮೂಲಕ ಹುಲಿ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಕಣಿಯನಹುಂಡಿ ಬಳಿ ಕಾಣಿಸಿಕೊಂಡಿದ್ದು ಇದೇ ಹುಲಿನಾ?
ಜ.30 ರಂದು ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಹುಲಿ ಮರಟಿಕ್ಯಾತನಹಳ್ಳಿ, ಜಟ್ಟಿಹುಂಡಿ ಬಳಿ ಕಾಣಿಸಿಕೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಆದರೆ, ಮಂಗಳವಾರ ಬೆಳಿಗ್ಗೆ ಕಾಣಿಸಿಕೊಂಡ ಹುಲಿ ಯಾವುದು ಎಂದು ಪತ್ತೆ ಮಾಡಲು ಅರಣ್ಯ ಸಿಬ್ಬಂದಿ ಎರಡನೇ ದಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಡಿಸಿಎಫ್ ಕೆ.ಪರಮೇಶ್, ಎಸಿಎಫ್ ರವೀಂದ್ರ ಆರ್‌ಎಫ್‌ಒ ಸಂತೋಷ್ ಹೂಗಾರ್, ಡಿಆರ್‌ಎಫ್ಒ ಸತೀಶ್ ಸೇರಿದಂತೆ 20ಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

7 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

7 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

8 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

9 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

9 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

10 hours ago