ಮೈಸೂರು: ಜಾತಿಗಣತಿಗೆ ಮತ್ತಷ್ಟು ಕಾಲಾವಕಾಶ ಬೇಕಾಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಗಣತಿ ವೇಳೆ ಕೆಲವು ತಾಂತ್ರಿಕ ದೋಷ ಕಂಡು ಬಂದಿದೆ. ಪ್ರಾರಂಭದ ಎರಡು ದಿನಗಳಲ್ಲಿ ಸರ್ವರ್ ಸಮಸ್ಯೆ ಎದುರಾಗಿದೆ. ಇದರಿಂದ ಗಣತಿಗೆ ಸ್ವಲ್ಪ ಅಡಚಣೆ ಆಗಿದೆ. ಹಂತ ಹಂತವಾಗಿ ತಾಂತ್ರಿಕ ದೋಷ ಸರಿಹೋಗುತ್ತಿದೆ. ಈ ತಾಂತ್ರಿಕ ದೋಷ ವಿಚಾರವನ್ನು ಆಯೋಗದ ಅಧ್ಯಕ್ಷ ನಾಗಮೋಹನ್ ದಾಸ್ ಅವರ ಗಮನಕ್ಕೂ ತಂದಿದ್ದೇವೆ.
ಸರ್ಕಾರ ಕೊಟ್ಟ ಕಾಲಾವಕಾಶದಲ್ಲಿ ಸರ್ವೆ ಪೂರ್ಣಗೊಳಿಸಲು ಕಷ್ಟಸಾಧ್ಯ. ಮೇ.21ರ ಒಳಗೆ ಸಮೀಕ್ಷೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ಬಹುಶಃ ಸರ್ಕಾರದ ಕಾಲ ಮಿತಿಯೊಳಗೆ ಪೂರ್ಣಗೊಳಿಸಲು ಸಾಧ್ಯವಾಗದೆ ಇರಬಹುದು. ಸಮೀಕ್ಷೆ ಕ್ರಮಬದ್ಧವಾಗಿ ನಡೆಸಲು ಮತ್ತಷ್ಟು ಕಾಲಾವಕಾಶ ಬೇಕಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರಲ್ಲಿ ಸಮೀಕ್ಷೆಗೆ ಮತ್ತಷ್ಟು ಕಾಲಾವಕಾಶಕ್ಕಾಗಿ ಮನವಿ ಮಾಡುತ್ತೇನೆ. ಸರ್ವರೂ ಸಮೀಕ್ಷೆ ವೇಳೆ ತಮ್ಮ ಉಪ ಜಾತಿಗಳನ್ನು ಕಡ್ಡಾಯವಾಗಿ ನಮೂದಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…