Stampede tragedy: Vatal Nagaraj demands ₹5 crore compensation.
ಮೈಸೂರು: ಟಿಪ್ಪು ಸುಲ್ತಾನೇ ಕೆಆರ್ಎಸ್ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕೆಆರ್ಎಸ್ಗೆ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನೇ ಡ್ಯಾಂಗೆ ಅಡಿಗಲ್ಲಿಟ್ಟಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ. ಇದು ಮಾಧ್ಯಮ ಪ್ರತಿನಿಧಿಗಳಾದ ನಿಮಗೆ ಗೊತ್ತಿಲ್ವಾ.? ಎಂದು ಪ್ರಶ್ನೆ ಮಾಡುವ ಮೂಲಕ ಮಹದೇವಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಇನ್ನು ಕೆಆರ್ಎಸ್ ಅಣೆಕಟ್ಟಿನ ಬಳಿಯೇ ಶಿಲಾನ್ಯಾಸ ಇದೆ. ಕೆಆರ್ಎಸ್ಗೆ ಒಳಗೆ ಹೋಗುವಾಗ ಬಲಗಡೆ ದ್ವಾರದಲ್ಲಿ ಟಿಪ್ಪುನೇ ಅಡಿಗಲ್ಲಿಟ್ಟಿದ್ದು ಎಂದು ಬರೆದಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ವಿವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.
ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅಚ್ವುಕಟ್ಟಾಗಿ ಮಾಡಬೇಕು. ದಸರಾ ಅಂದ್ರೆ ಆನೆ ಕರೆಸೋದು, ಸ್ನಾನ, ವಾಕಿಂಗ್ ಮಾಡಿಸೋದು, ಮೆರವಣಿಗೆ ಮಾಡಿಸೋದಲ್ಲ. ಸಾಂಪ್ರದಾಯಿಕ ಪರಂಪರೆಯನ್ನು ಸಾರುವ ರೀತಿಯಲ್ಲಿ ದಸರಾ ಮಾಡಬೇಕು. ಆಚಾರ-ವಿಚಾರ ತಿಳಿಸುವ ಆಚರಣೆ ಮಾಡಬೇಕು. ಚಾಮರಾಜನಗರದಲ್ಲಿ ಪ್ರತಿ ಬಾರಿಯೂ ನಡೆಯುತ್ತಿದ್ದ ಗ್ರಾಮೀಣ ದಸರಾವನ್ನು ಈ ಬಾರಿಯೂ ಆಚರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಅದು ನಿಲ್ಲಬಾರದು. ಒಂದು ವೇಳೆ ಅಲ್ಲಿ ದಸರಾ ನಿಂತುಹೋದರೆ ಚಾಮರಾಜನಗರ ಜನತೆಗೆ ಅಪಮಾನ ಮಾಡಿದ ರೀತಿ ಆಗುತ್ತದೆ ಎಂದು ಹೇಳಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…