Stampede tragedy: Vatal Nagaraj demands ₹5 crore compensation.
ಮೈಸೂರು: ಟಿಪ್ಪು ಸುಲ್ತಾನೇ ಕೆಆರ್ಎಸ್ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕೆಆರ್ಎಸ್ಗೆ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನೇ ಡ್ಯಾಂಗೆ ಅಡಿಗಲ್ಲಿಟ್ಟಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ. ಇದು ಮಾಧ್ಯಮ ಪ್ರತಿನಿಧಿಗಳಾದ ನಿಮಗೆ ಗೊತ್ತಿಲ್ವಾ.? ಎಂದು ಪ್ರಶ್ನೆ ಮಾಡುವ ಮೂಲಕ ಮಹದೇವಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಇನ್ನು ಕೆಆರ್ಎಸ್ ಅಣೆಕಟ್ಟಿನ ಬಳಿಯೇ ಶಿಲಾನ್ಯಾಸ ಇದೆ. ಕೆಆರ್ಎಸ್ಗೆ ಒಳಗೆ ಹೋಗುವಾಗ ಬಲಗಡೆ ದ್ವಾರದಲ್ಲಿ ಟಿಪ್ಪುನೇ ಅಡಿಗಲ್ಲಿಟ್ಟಿದ್ದು ಎಂದು ಬರೆದಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ವಿವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.
ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅಚ್ವುಕಟ್ಟಾಗಿ ಮಾಡಬೇಕು. ದಸರಾ ಅಂದ್ರೆ ಆನೆ ಕರೆಸೋದು, ಸ್ನಾನ, ವಾಕಿಂಗ್ ಮಾಡಿಸೋದು, ಮೆರವಣಿಗೆ ಮಾಡಿಸೋದಲ್ಲ. ಸಾಂಪ್ರದಾಯಿಕ ಪರಂಪರೆಯನ್ನು ಸಾರುವ ರೀತಿಯಲ್ಲಿ ದಸರಾ ಮಾಡಬೇಕು. ಆಚಾರ-ವಿಚಾರ ತಿಳಿಸುವ ಆಚರಣೆ ಮಾಡಬೇಕು. ಚಾಮರಾಜನಗರದಲ್ಲಿ ಪ್ರತಿ ಬಾರಿಯೂ ನಡೆಯುತ್ತಿದ್ದ ಗ್ರಾಮೀಣ ದಸರಾವನ್ನು ಈ ಬಾರಿಯೂ ಆಚರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಅದು ನಿಲ್ಲಬಾರದು. ಒಂದು ವೇಳೆ ಅಲ್ಲಿ ದಸರಾ ನಿಂತುಹೋದರೆ ಚಾಮರಾಜನಗರ ಜನತೆಗೆ ಅಪಮಾನ ಮಾಡಿದ ರೀತಿ ಆಗುತ್ತದೆ ಎಂದು ಹೇಳಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…