ಮೈಸೂರು ನಗರ

ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು: ವಾಟಾಳ್‌ ನಾಗರಾಜ್‌

ಮೈಸೂರು: ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

ಕೆಆರ್‌ಎಸ್‌ಗೆ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನೇ ಡ್ಯಾಂಗೆ ಅಡಿಗಲ್ಲಿಟ್ಟಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ. ಇದು ಮಾಧ್ಯಮ ಪ್ರತಿನಿಧಿಗಳಾದ ನಿಮಗೆ ಗೊತ್ತಿಲ್ವಾ.? ಎಂದು ಪ್ರಶ್ನೆ ಮಾಡುವ ಮೂಲಕ ಮಹದೇವಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಇನ್ನು ಕೆಆರ್‌ಎಸ್‌ ಅಣೆಕಟ್ಟಿನ ಬಳಿಯೇ ಶಿಲಾನ್ಯಾಸ ಇದೆ. ಕೆಆರ್‌ಎಸ್‌ಗೆ ಒಳಗೆ ಹೋಗುವಾಗ ಬಲಗಡೆ ದ್ವಾರದಲ್ಲಿ ಟಿಪ್ಪುನೇ ಅಡಿಗಲ್ಲಿಟ್ಟಿದ್ದು ಎಂದು ಬರೆದಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ವಿವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.

ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅಚ್ವುಕಟ್ಟಾಗಿ ಮಾಡಬೇಕು. ದಸರಾ ಅಂದ್ರೆ ಆನೆ ಕರೆಸೋದು, ಸ್ನಾನ, ವಾಕಿಂಗ್ ಮಾಡಿಸೋದು, ಮೆರವಣಿಗೆ ಮಾಡಿಸೋದಲ್ಲ. ಸಾಂಪ್ರದಾಯಿಕ ಪರಂಪರೆಯನ್ನು ಸಾರುವ ರೀತಿಯಲ್ಲಿ ದಸರಾ ಮಾಡಬೇಕು. ಆಚಾರ-ವಿಚಾರ ತಿಳಿಸುವ ಆಚರಣೆ ಮಾಡಬೇಕು. ಚಾಮರಾಜನಗರದಲ್ಲಿ ಪ್ರತಿ ಬಾರಿಯೂ ನಡೆಯುತ್ತಿದ್ದ ಗ್ರಾಮೀಣ ದಸರಾವನ್ನು ಈ ಬಾರಿಯೂ ಆಚರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಅದು ನಿಲ್ಲಬಾರದು. ಒಂದು ವೇಳೆ ಅಲ್ಲಿ ದಸರಾ ನಿಂತುಹೋದರೆ ಚಾಮರಾಜನಗರ ಜನತೆಗೆ ಅಪಮಾನ ಮಾಡಿದ ರೀತಿ ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಇಂದು ಕಂದೇಗಾಲದಲ್ಲಿ ಪಾರ್ವತಾಂಬೆ ಜಾತ್ರೆ

ಮಹೇಂದ್ರ ಹಸಗೂಲಿ ರಥೋತ್ಸವ ಕಣ್ತುಂಬಿಕೊಳ್ಳಲು ಉತ್ಸುಕರಾಗಿರುವ ಜನರು; ಭಾರೀ ನೂಕು ನುಗ್ಗಲು, ಎಚ್ಚರಿಕೆ ವಹಿಸಲು ಸೂಚನೆ  ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲದ…

3 mins ago

ಪಿಎನ್‌ಜಿ ಬಳಕೆದಾರರಿಗೆ ಎಚ್ಚರಿಕೆ

ಹೆಚ್.ಎಸ್.ದಿನೇಶ್‌ಕುಮಾರ್ ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು ಸಿಲಿಂಡರ್‌ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್‌ಗೂ ಇನ್ನು ಮುಂದೆ…

7 mins ago

120 ಕಿಮೀ ಯುಜಿ ಕೇಬಲ್ ಅಳವಡಿಕೆಗೆ 400 ಗುಂಡಿ

ಕೆ.ಬಿ.ರಮೇಶನಾಯಕ ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣಕ್ಕೆ ಮಂಜೂರಾದ ೪೦೦ ಕೋಟಿ ರೂ.ಅನುದಾನದಲ್ಲಿ ೯೦ ಕೋಟಿರೂ. ಯುಜಿಡಿ, ನೀರಿನ ಪೈಪ್‌ಲೇನ್‌ಗೆ ಮೀಸಲು…

12 mins ago

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

14 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

14 hours ago