ಮೈಸೂರು ನಗರ

ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು: ವಾಟಾಳ್‌ ನಾಗರಾಜ್‌

ಮೈಸೂರು: ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

ಕೆಆರ್‌ಎಸ್‌ಗೆ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನೇ ಡ್ಯಾಂಗೆ ಅಡಿಗಲ್ಲಿಟ್ಟಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ. ಇದು ಮಾಧ್ಯಮ ಪ್ರತಿನಿಧಿಗಳಾದ ನಿಮಗೆ ಗೊತ್ತಿಲ್ವಾ.? ಎಂದು ಪ್ರಶ್ನೆ ಮಾಡುವ ಮೂಲಕ ಮಹದೇವಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಇನ್ನು ಕೆಆರ್‌ಎಸ್‌ ಅಣೆಕಟ್ಟಿನ ಬಳಿಯೇ ಶಿಲಾನ್ಯಾಸ ಇದೆ. ಕೆಆರ್‌ಎಸ್‌ಗೆ ಒಳಗೆ ಹೋಗುವಾಗ ಬಲಗಡೆ ದ್ವಾರದಲ್ಲಿ ಟಿಪ್ಪುನೇ ಅಡಿಗಲ್ಲಿಟ್ಟಿದ್ದು ಎಂದು ಬರೆದಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ವಿವಾದ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.

ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅಚ್ವುಕಟ್ಟಾಗಿ ಮಾಡಬೇಕು. ದಸರಾ ಅಂದ್ರೆ ಆನೆ ಕರೆಸೋದು, ಸ್ನಾನ, ವಾಕಿಂಗ್ ಮಾಡಿಸೋದು, ಮೆರವಣಿಗೆ ಮಾಡಿಸೋದಲ್ಲ. ಸಾಂಪ್ರದಾಯಿಕ ಪರಂಪರೆಯನ್ನು ಸಾರುವ ರೀತಿಯಲ್ಲಿ ದಸರಾ ಮಾಡಬೇಕು. ಆಚಾರ-ವಿಚಾರ ತಿಳಿಸುವ ಆಚರಣೆ ಮಾಡಬೇಕು. ಚಾಮರಾಜನಗರದಲ್ಲಿ ಪ್ರತಿ ಬಾರಿಯೂ ನಡೆಯುತ್ತಿದ್ದ ಗ್ರಾಮೀಣ ದಸರಾವನ್ನು ಈ ಬಾರಿಯೂ ಆಚರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಅದು ನಿಲ್ಲಬಾರದು. ಒಂದು ವೇಳೆ ಅಲ್ಲಿ ದಸರಾ ನಿಂತುಹೋದರೆ ಚಾಮರಾಜನಗರ ಜನತೆಗೆ ಅಪಮಾನ ಮಾಡಿದ ರೀತಿ ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago