ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ ಕುರಿತು ಹೋರಾಟ ಮಾಡುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದು ಲೀಟರ್ ಬಾಟಲಿಗೆ 20 ರೂ ಕೊಟ್ಟು ಕುಡಿತೀರ. ಒಂದು ಸಾವಿರ ಟ್ರೀಟೆಡ್ ಲೀಟರ್ ನೀರಿನ ಬೆಲೆ 5 ರೂ. ಮಾತ್ರ. ನಿಮ್ಮ ಮನೆ ಒಳಗೆ ಬರೋದಕ್ಕೆ ಒಂದು ಲೀಟರ್ಗೆ 0.15 ಪೈಸೆ ಮಾತ್ರ ಏರಿಕೆ ಮಾಡಿದ್ದಾರೆ. ಕಳೆದ 15 ವರ್ಷಗಳಿಂದ ಜಾಸ್ತಿ ಮಾಡಿರಲಿಲ್ಲ. ಕಾರ್ಪೋರೇಷನ್ ಈ ಏರಿಕೆಯಿಂದ ಬರೋದೆ ಕೇವಲ 35 ಲಕ್ಷ ಅಷ್ಟೇ. ಶೇ 30% ಏರಿಕೆ ಮಾಡಿದ್ದಾರೆ ಅಂತ ಇಲ್ಲ ಸಲ್ಲದ ಆರೋಪವನ್ನು ಬಿಜೆಪಿಗರು ಮಾಡುತ್ತಾರೆ. ಟೋಲ್ ನಲ್ಲಿ ಪ್ರತಿ ವರ್ಷ ಏರಿಕೆ ಮಾಡುತ್ತಾನೆ ಇದ್ದಾರೆ. ಅದರ ಬಗ್ಗೆ ಕೇಳೋರು ಯಾರು ಇಲ್ಲ. ಬಿಜೆಪಿ ನಾಯಕರು ಉಸಿರು ಬಿಡುತ್ತಿಲ್ಲ. ತಂಬಾಕು ಬೆಳೆಗಾರರ ಕಷ್ಟ ಕೇಳುತ್ತಿಲ್ಲ. ರೈತರ ಸಮಸ್ಯೆಗಳ ಕುರಿತು ಹೋರಾಟ ಮಾಡುತ್ತಿಲ್ಲ. ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಕೇಂದ್ರ ಸಚಿವ ಪಿಯೂಶ್ ಗೋಯಲ್ ಬಳಿ ಹೋಗಿ ಜೆಡಿಎಸ್ ನಾಯಕರು ಫೋಟೋ ತೆಗೆಸಿಕೊಂಡು ಬಂದ್ರು ಏನೂ ಪ್ರಯೋಜನ ಆಗಿಲ್ಲ. ಅವರು ಭೇಟಿ ಮಾಡಿ ಬಂದಾಗಿನಿಂದ ಇನ್ನೂ ಇಳಿಕೆಯಾಗಿದೆ. ಹಾಗಾದರೆ ಇವರು ಕೇಂದ್ರ ಸಚಿವರ ಜೊತೆ ಏನು ಮಾತನಾಡಿದ್ರು ಗೊತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…