ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವರ್ಧಂತಿ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ, ತಾಯಿಯ ದರ್ಶನ ಪಡೆಯುತ್ತಿದ್ದಾರೆ.
ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ದೇವಿಯ ಜನ್ಮದಿನವನ್ನು ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಹೋಮ ಹವನಗಳೊಂದಿಗೆ ದೇವಿಯ ಮೆರವಣಿಗೆಯನ್ನು ಮಾಡಲಾಯಿತು.
ಇಡೀ ಮೈಸೂರು ನಗರವು ತಮ್ಮ ನೆಚ್ಚಿನ ದೇವಿಯ ಜನ್ಮದಿನವನ್ನು ಬೆಳಿಗ್ಗೆಯಿಂದಲೇ ಪ್ರಸಾದ ವಿತರಿಸುವ ಮೂಲಕ ಆಚರಿಸಲಾಗುತ್ತಿದೆ.
ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ದಿನದಂದು ತಾಯಿ ಚಾಮುಂಡಿಯನ್ನು ಅದ್ದೂರಿಯಾಗಿ ಅಲಂಕರಿಸಲಾಗಿದ್ದು, ಹೂವು, ಹಣ್ಣುಗಳಿಂದ ವಿಶೇಷವಾಗಿ ಅಲಂಕೃತಗೊಂಡ ದೇವಿಯು ಗರ್ಭಗುಡಿಯಿಂದ ಸಾರ್ವಜನಿಕರಿಗೆ ನೇರ ದರ್ಶನ ನೀಡಿದ್ದಾಳೆ.
ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ದೇವಿಗೆ ಮಾತ್ರವಲ್ಲ, ಇಡೀ ದೇವಾಲಯವನ್ನು ಹೂವು ಮತ್ತು ಹಣ್ಣುಗಳಿಂದ ಸುಂದರವಾಗಿ ಅಲಂಕರಿಸಲಾಗಿದೆ.
ಇಂದು ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರಿಗೆ ವಿಶೇಷ ಬಸ್ ಸೌಲಭ್ಯಗಳನ್ನು ಮಾಡಲಾಗಿದೆ.
ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದ್ದು, ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೆಟ್ಟದಲ್ಲಿ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…