ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಗಿದೆ.
ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಗಿದೆ.
ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯನ್ನು ತೂಕ ಪರೀಕ್ಷೆ ಮಾಡುವುದು ಆಗಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ. ತೂಕದ ಆಧಾರದ ಮೇಲೆಯೇ ಗಜಪಡೆಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಹೀಗಾಗಿ ಇಂದು ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಂ ಅಂಡ್ ಕೋ, ಎಲೆಕ್ಟ್ರಿಕ್ ತೂಕ ಮಾಪನ ಕೇಂದ್ರದಲ್ಲಿ 9 ಆನೆಗಳನ್ನು ತೂಕ ಮಾಡಲಾಯಿತು.
ಈ 9 ಆನೆಗಳ ಪೈಕಿ ಕ್ಯಾಪ್ಟನ್ ಅಭಿಮನ್ಯುನೇ ಅತೀ ಹೆಚ್ಚು ತೂಕ ಇದ್ದಾನೆ. ಅಭಿಮನ್ಯು 5560 ಕೆಜಿ ತೂಕ ಹೊಂದಿದ್ದಾನೆ. ಉಳಿದ ಆನೆಗಳಿಗಿಂತ ಅಧಿಕ ತೂಕ ಹೊಂದಿದ್ದಾನೆ.
ಉಳಿದಂತೆ ವರಲಕ್ಷ್ಮೀ 3495, ಭೀಮ 4945, ಏಕಲವ್ಯ 4730, ಲಕ್ಷ್ಮೀ 2480, ರೋಹಿತ್ 3625, ಗೋಪಿ 4970, ಕಂಜನ್ 4515, ಧನಂಜಯ 5155 ಕೆಜಿ ತೂಕ ಇದ್ದಾನೆ.
ದಸರಾ ಗಜಪಡೆಯ ತೂಕ ಪರೀಕ್ಷೆ ಕುರಿತು ಮೈಸೂರು ವಲಯ ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಪ್ರಭುಗೌಡ ಪ್ರತಿಕ್ರಿಯೆ ನೀಡಿದ್ದು, ಆನೆಗಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ. ಆನೆಗಳ ತೂಕದ ಆಧಾರದ ಮೇಲೆ ಪೌಷ್ಟಿಕ ಆಹಾರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜಂಬೂಸವಾರಿ ಮೆರವಣಿಗೆಗೂ ಮುನ್ನ ಮತ್ತೊಮ್ಮೆ ತೂಕ ಪರೀಕ್ಷೆ ಮಾಡುತ್ತೇವೆ. ನಾಳೆಯಿಂದಲೇ ಗಜಪಡೆಯ ನಿತ್ಯ ತಾಲೀಮು ಆರಂಭವಾಗುತ್ತದೆ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…