ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ನಾಳೆ ಮೈಸೂರು ಬಂದ್ ನಿರ್ಧಾರವನ್ನು ಕೈಬಿಟ್ಟಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ.
ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಸಮಾಲೋಚನೆ ನಡೆಸಿದ ಬಳಿಕವೇ ಕಾಂಗ್ರೆಸ್ ನಾಯಕರು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸಲು ತೀರ್ಮಾನ ಮಾಡಲಾಗಿದೆ.
ನಾಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಶಾಸಕ ಹರೀಶ್ ಗೌಡ ಮಾಹಿತಿ ನೀಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಸರ್ಕಾರ ನಡೆಸುತ್ತಿರುವ ನಾಯಕರೇ ಕಾಂಗ್ರೆಸ್ ಪಕ್ಷದವರಾಗಿರುವ ಕಾರಣ ಶಿಸ್ತಿನಿಂದ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನಾಳೆ ನಡೆಯುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ಎಲ್ಲಾ ನಾಯಕರು ಹಾಗೂ ಈ ಭಾಗದ ಶಾಸಕರು ಭಾಗಿಯಾಗಲಿದ್ದು, ಸಿಎಂ ಸಿದ್ದರಾಮಯ್ಯ ಪರ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…