ಮೈಸೂರು ನಗರ

ನಾಳೆ ಅರಮನೆ ಆವರಣ ಪ್ರವೇಶಿಸಲಿರುವ ದಸರಾ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ನಿನ್ನೆ ದಸರಾ ಗಜಪಡೆ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ.

ನಿನ್ನೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮೈಸೂರಿಗೆ ಬರಮಾಡಿಕೊಳ್ಳಲಾಯಿತು. ಸಂಜೆ ವೇಳೆಗೆ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನಕ್ಕೆ ಎಂಟ್ರಿಯಾದ ಗಜಪಡೆ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ಬೆಳಿಗ್ಗೆ ಮೈಸೂರು ಅರಮನೆ ಆವರಣ ತಲುಪಲಿವೆ.

ನಾಳೆ ಬೆಳಿಗ್ಗೆ 10.10 ನಿಮಿಷದಿಂದ 10.30ರ ಶುಭ ಗಳಿಗೆಯಲ್ಲಿ ಅರಮನೆ ಆವರಣಕ್ಕೆ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಎಂಟ್ರಿಕೊಡಲಿದ್ದು, ಗಜಪಡೆಯನ್ನು ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇನ್ನು ಅರಮನೆ ಆವರಣದಲ್ಲಿ ಗಜಪಡೆ, ಕಾವಾಡಿ, ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಆನೆಗಳು ತಂಗಲು ಮತ್ತು ಕಾವಾಡಿ, ಮಾವುತರಿಗೆ ತಾತ್ಕಾಲಿಕ ಟೆಂಟ್‌ ಮಾಡಲಾಗಿದೆ. ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.

ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಒಂದುವರೆ ತಿಂಗಳಿಗೂ ಮೊದಲೇ ಗಜಪಡೆ ಮೈಸೂರಿಗೆ ಆಗಮಿಸಿವೆ. ದಿನನಿತ್ಯ ಗಜಪಡೆಗೆ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಲು ತಾಲೀಮು ನಡೆಸಲಾಗುತ್ತದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

2 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

2 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

3 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

3 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

4 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

4 hours ago