ಮೈಸೂರು ನಗರ

ನಾಳೆ ಆಯುಧಪೂಜೆ ಸಂಭ್ರಮ: ಮೈಸೂರಿನಲ್ಲಿ ಹೂವು-ಹಣ್ಣು ಖರೀದಿ ಭರಾಟೆ ಜೋರು

ಮೈಸೂರು: ನಾಳೆ ಆಯುಧಪೂಜೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ.

ಇಂದು ಬೆಳಿಗ್ಗೆಯಿಂದಲೇ ಜನರು ಹೂವು-ಹಣ್ಣು, ಬೂದುಗುಂಬಳಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿ ಮಾಡುತ್ತಿದ್ದು, ಹೂವುಗಳ ಬೆಲೆಯಂತೂ ಗಗನಕ್ಕೇರಿದೆ.

ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ

ಇನ್ನು ಕೆಲವು ಹಣ್ಣುಗಳು ಹಾಗೂ ಹೂವುಗಳ ಬೆಲೆಗಳು ಕಳೆದ ವಾರದಿಂದಲೇ ಹೆಚ್ಚಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಆಯುಧಪೂಜೆಯ ಹಿನ್ನೆಲೆಯಲ್ಲಿ ಸೇವಂತಿಗೆ, ಮಾರಿಗೋಲ್ಡ್‌ ಹಾಗೂ ಗುಲಾಬಿಗೆ ಹೂಗಳಿಗೆ ಬೇಡಿಕೆ ಹೆಚ್ಚಾಗಿದ್ದರೂ ಗ್ರಾಹಕರು ಖರೀದಿ ಮಾಡುತ್ತಿರುವುದು ವಿಶೇಷವೆನಿಸಿದೆ.

ಮೈಸೂರು ಪ್ರಮುಖ ರಸ್ತೆಗಳು ಹಾಗೂ ದೇವರಾಜ ಮಾರುಕಟ್ಟೆಯಲ್ಲಿ ಜನಜಂಗುಳಿ ಏರ್ಪಟ್ಟಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಜೆಯ ವೇಳೆಗೆ ಖರೀದಿ ಭರಾಟೆ ಮತ್ತಷ್ಟು ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆಯಾಗಿ ಅಲ್ಲಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

19 mins ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

1 hour ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

2 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

3 hours ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

3 hours ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

4 hours ago