ಮೈಸೂರು ನಗರ

ನಾಳೆ ಆಯುಧಪೂಜೆ ಸಂಭ್ರಮ: ಮೈಸೂರಿನಲ್ಲಿ ಹೂವು-ಹಣ್ಣು ಖರೀದಿ ಭರಾಟೆ ಜೋರು

ಮೈಸೂರು: ನಾಳೆ ಆಯುಧಪೂಜೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ.

ಇಂದು ಬೆಳಿಗ್ಗೆಯಿಂದಲೇ ಜನರು ಹೂವು-ಹಣ್ಣು, ಬೂದುಗುಂಬಳಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿ ಮಾಡುತ್ತಿದ್ದು, ಹೂವುಗಳ ಬೆಲೆಯಂತೂ ಗಗನಕ್ಕೇರಿದೆ.

ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ

ಇನ್ನು ಕೆಲವು ಹಣ್ಣುಗಳು ಹಾಗೂ ಹೂವುಗಳ ಬೆಲೆಗಳು ಕಳೆದ ವಾರದಿಂದಲೇ ಹೆಚ್ಚಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಆಯುಧಪೂಜೆಯ ಹಿನ್ನೆಲೆಯಲ್ಲಿ ಸೇವಂತಿಗೆ, ಮಾರಿಗೋಲ್ಡ್‌ ಹಾಗೂ ಗುಲಾಬಿಗೆ ಹೂಗಳಿಗೆ ಬೇಡಿಕೆ ಹೆಚ್ಚಾಗಿದ್ದರೂ ಗ್ರಾಹಕರು ಖರೀದಿ ಮಾಡುತ್ತಿರುವುದು ವಿಶೇಷವೆನಿಸಿದೆ.

ಮೈಸೂರು ಪ್ರಮುಖ ರಸ್ತೆಗಳು ಹಾಗೂ ದೇವರಾಜ ಮಾರುಕಟ್ಟೆಯಲ್ಲಿ ಜನಜಂಗುಳಿ ಏರ್ಪಟ್ಟಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಜೆಯ ವೇಳೆಗೆ ಖರೀದಿ ಭರಾಟೆ ಮತ್ತಷ್ಟು ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆಯಾಗಿ ಅಲ್ಲಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago