ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಇದೇ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿ ಗಡಿಯಲ್ಲಿ ಅನ್ನದಾತರ ಹಿತಕ್ಕಾಗಿ ಹೋರಾಡುತ್ತಿದ್ದ ದಲೈವಾಲಾ 53 ದಿನಗಳ ಉಪವಾಸ ಕೈಬಿಟ್ಟು ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದರು.
ಇನ್ನು ಬೆಂಬಲ ಬೆಲೆ ಖಾತ್ರಿ, ಕಾನೂನು ಜಾರಿಗಾಗಿ ಒತ್ತಾಯಿಸಿ ದಲೈವಾಲಾ 53 ದಿನದ ಉಪವಾಸ ಸತ್ಯಾಗ್ರಹ ನಿಲ್ಲಿಸಿ ವೈದ್ಯಕೀಯ ಚಿಕಿತ್ಸೆಗೆ ಸಮ್ಮತಿ ಸೂಚಿಸಿದ್ದಾರೆ. ಆದರೆ ಬೇಡಿಕೆ ಈಡೇರುವ ತನಕ ಚಳುವಳಿ ಮುಂದುವರಿಯುತ್ತದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಕರೆ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿಯೂ ತಾಲ್ಲೂಕು ಜಿಲ್ಲಾ ಮಟ್ಟದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು ಎಂದು ತಿಳಿಸಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…