ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಇದೇ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿ ಗಡಿಯಲ್ಲಿ ಅನ್ನದಾತರ ಹಿತಕ್ಕಾಗಿ ಹೋರಾಡುತ್ತಿದ್ದ ದಲೈವಾಲಾ 53 ದಿನಗಳ ಉಪವಾಸ ಕೈಬಿಟ್ಟು ವೈದ್ಯಕೀಯ ಚಿಕಿತ್ಸೆಗೆ ಒಪ್ಪಿಗೆ ನೀಡಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದರು.
ಇನ್ನು ಬೆಂಬಲ ಬೆಲೆ ಖಾತ್ರಿ, ಕಾನೂನು ಜಾರಿಗಾಗಿ ಒತ್ತಾಯಿಸಿ ದಲೈವಾಲಾ 53 ದಿನದ ಉಪವಾಸ ಸತ್ಯಾಗ್ರಹ ನಿಲ್ಲಿಸಿ ವೈದ್ಯಕೀಯ ಚಿಕಿತ್ಸೆಗೆ ಸಮ್ಮತಿ ಸೂಚಿಸಿದ್ದಾರೆ. ಆದರೆ ಬೇಡಿಕೆ ಈಡೇರುವ ತನಕ ಚಳುವಳಿ ಮುಂದುವರಿಯುತ್ತದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಕರೆ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿಯೂ ತಾಲ್ಲೂಕು ಜಿಲ್ಲಾ ಮಟ್ಟದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…