ಪಾಕಿಸ್ತಾನದ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಿದೆ: ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನದ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಘೋಷಣೆ ಆಗಿದೆ. ಮುಂದೇನಾದರೂ ಉಲ್ಲಂಘನೆ ಆದರೆ ಸುಮ್ಮನೆ ಬಿಡೋದಿಲ್ಲ ಎಂಬ ಎಚ್ಚರಿಕೆಯ ಸ್ಪಷ್ಟ ಸಂದೇಶವನ್ನು ಪ್ರಧಾನಿ ಮೋದಿ ಕೊಟ್ಟಿದ್ದಾರೆ. ಪಾಕಿಸ್ತಾನ ಯಾವುದೇ ಹೋರಾಟ ಮಾಡದೇ ಹುಟ್ಟಿರುವ ರಾಷ್ಟ್ರ. ನಾವು ಸಾವಿರಾರು ವರ್ಷಗಳಿಂದ ಪರಕೀಯರ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ನೆಲದ ಮಹತ್ವವೇ ಹೋರಾಟದ ಮನೋಭಾವದಿಂದ ಕೂಡಿದೆ. ನಾವು ಪಾಕಿಸ್ತಾ‌ನದಂತೆ ಯಾರೋ ಕೊಟ್ಟಿರುವ ಭಿಕ್ಷೆಯಲ್ಲಿ ಬದುಕುತ್ತಿಲ್ಲ. 75 ವರ್ಷದ ಹಿಂದೆ ದೇಶ ತುಂಡಾದಾಗ ಉದಯವಾದ ಪಾಕಿಸ್ತಾನ ಉಗ್ರವಾದಕ್ಕೆ ಬೆಂಬಲ ಕೊಡುತ್ತಾ ಬಂದಿದೆ. ಹುಡುಕಿ ಹುಡುಕಿ ಹಿಂದುಗಳನ್ನು ಕೊಲ್ಲುವ ಮಟ್ಟಕ್ಕೆ ಉಗ್ರವಾದ ಬೆಳೆದಿದೆ. ಪಾಕಿಸ್ತಾನದ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ಪಾಕಿಸ್ತಾನದ ವಾಯುನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಇದಕ್ಕೆ ಕಾರಣವಾದ ಭಾರತೀಯ ಸೇನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇ‌ನೆ ಎಂದರು.

ಇನ್ನು ಭಾರತ-ಪಾಕಿಸ್ತಾನದ ನಡುವಿನ ಕದನದಲ್ಲಿ ಕೈ ಕಮಲ ನಡುವೆ ಕ್ರೆಡಿಟ್ ವಾರ್ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯುದ್ಧದ ಕ್ರೆಡಿಟ್ ಭಾರತೀಯ ಸೇನೆಗೆ ಸಲ್ಲಬೇಕು ಎನ್ನುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಹಾಗಾದರೆ ಗ್ಯಾರಂಟಿ ಯೋಜನೆಗಳ ಕ್ರೆಡಿಟ್ ಯಾರಿಗೆ ಸಲ್ಲಬೇಕು?. ಅದರಲ್ಲಿ ಸರ್ಕಾರದ ಪಾತ್ರವೇನಿದೆ? ಎಂದು ನಾವು ಸಿಎಂ ಅವರನ್ನು ಕೇಳಬೇಕಾಗುತ್ತದೆ. ಗ್ಯಾರಂಟಿ ಯೋಜನೆಯ ಶ್ರೇಯಸ್ಸು ಅಧಿಕಾರಿಗಳಿಗೆ ಸಲ್ಲಬೇಕು. ಭಾರತ-ಪಾಕಿಸ್ತಾನ ನಡುವಿನ ಕದನ ವಿಚಾರವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬಾರದು.
ನಾವು ಕೂಡ ಯುದ್ದದ ಯಶಸ್ಸು ಸೇನೆಗೆ ಸಲ್ಲಬೇಕು ಎಂದು ಹೇಳಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago