ಮೈಸೂರು ನಗರ

ಜನ ಮೆಚ್ಚುಗೆ ಪಡೆದ ಹಗ್ಗ-ಜಗ್ಗಾಟ : ಸಂಸದ ಯದುವೀರ್‌ ಅವರ ʼಫಿಟ್ ಯುವ ಫಾರ್ ವಿಕಸಿತ ಭಾರತʼ ಯೋಜನೆಯಡಿ ಆಯೋಜನೆ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ-ಜಗ್ಗಾಟ ಯಶಸ್ಸಿನ ಜತೆಗೆ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಓವಲ್ ಗೌಂಡ್‌ನಲ್ಲಿ ಸಂಸದರ ಕ್ರೀಡಾ ಮಹೋತ್ಸವದ ‘ಫಿಟ್ ಯುವ ಫಾರ್ ವಿಕಸಿತ ಭಾರತ’ದ ಯೋಜನೆಯಡಿ ಆಯೋಜಿಸಲಾಗಿದ್ದ ಹಗ್ಗ-ಜಗ್ಗಾಟ ಕ್ರೀಡೆ ಉದ್ಘಾಟಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಹಳ್ಳಿ ಸೊಗಡಿನ ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಇಷ್ಟೊಂದು ಜನರು ಭಾಗವಹಿಸಿರುವುದು ಖುಷಿ ತಂದಿದ್ದು, ಇದೊಂದು ಕ್ರೀಡಾಸಂಗಮ ಎಂದು ಯದುವೀರ್ ತಿಳಿಸಿದರು.

ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಚಂದ್ರಕಲಾ ಮಾತನಾಡಿ, ಈ ರೀತಿಯ ಪಂದ್ಯಗಳು ಆಯೋಜನೆಗೊಂಡಿದ್ದು ಸಂತಸ ತಂದಿದೆ ಎಂದು ಸಂತಸ ಹಂಚಿಕೊಂಡರು.

ಮೈಸೂರು 263 ಪೊಲೀಸ್ ತಂಡದ ಶಿವಕುಮಾ‌ರ್, ಇಂಥ ಕ್ರೀಡಾಕೂಟಗಳು ನಿರಂತರವಾಗಿ ನಡೆದರೆ ಸ್ಥಳೀಯ ಪ್ರತಿಭೆಗಳಿಗೆ” ಅವಕಾಶ ದೊರಕುತ್ತದೆ ಎಂದು ತಿಳಿಸಿದರು.

ಇದನ್ನು ಓದಿ : 2030ರೊಳಗೆ ಎಚ್‌ಐವಿ ನಿರ್ಮೂಲನೆಗೆ ಗುರಿ : ಸಚಿವ ದಿನೇಶ್‌ ಗುಂಡೂರಾವ್‌

ಸಂಸದ ಯದುವೀರ್ ಒಡೆಯರ್ ಅವರ ನೇತೃತ್ವದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇದು ಹೀಗೆಯೇ ಮುಂದುವರಿಯಲಿ ಎಂದು ಮೈಸೂರು ಪ್ಯಾಂಥರ್ಸ್‌ನ ರಮೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಪಂದ್ಯಾವಳಿಯಲ್ಲಿ 35ಕ್ಕೂ ಹೆಚ್ಚು ತಂಡಗಳು ಹಾಗೂ 300ಕ್ಕೂ ಹೆಚ್ಚು ಕ್ರೀಡಾಳುಗಳು ಭಾಗವಹಿಸಿದ್ದರು. ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಶಾಸಕ ನಾಗೇಂದ್ರ, ಹಾಗೂ ನಿಖಿಲೇಶ್, ಕೇಬಲ್ ಮಹೇಶ್, ದಿನೇಶ್ ಗೌಡ, ರಾಕೇಶ್ ಭಟ್, ಪೈಲ್ವಾನ್ ರವಿ, ಗೋಪಾಲ್ ಅರಸು ಉಪಸ್ಥಿತರಿದ್ದರು.

ಬಹುಮಾನ ವಿಜೇತರು : 

ಪುರುಷರ ವಿಭಾಗ
560 ಕೆಜಿಗಿಂತ ಕಡಿಮೆ ವಿಭಾಗದಲ್ಲಿ ಮೈಸೂರು ಪ್ಯಾಂಥರ್ಸ್ ಪ್ರಥಮ, ಯದುವೀರ್ ಬ್ರಿಗೇಡ್ ದ್ವಿತೀಯ ಸ್ಥಾನ ಪಡೆಯಿತು. 640 ಕೆಜಿಗಿಂತ ಕಡಿಮೆ ವಿಭಾಗದಲ್ಲಿ ಫೈರ್ ಫೈಟರ್ಸ್ ಪ್ರಥಮ, ಮೈಸೂರು ಸಿಟಿ ಪೊಲೀಸ್ ತಂಡ ಎರಡನೇ ಸ್ಥಾನ ಗಳಿಸಿದೆ. 720 ಕೆಜಿಗಿಂತ ಕಡಿಮೆ ತೂಕದ ವಿಭಾಗದಲ್ಲಿ ಮೈಸೂರು ಟೈಗರ್ ಪ್ರಥಮ, ಸಿಎಫ್‌ಒ ಝನ್ ಮೈಸೂರು ಫೈರ್ ಎರಡನೇ
ಸ್ಥಾನ ಗಿಟ್ಟಿಸಿಕೊಂಡಿದೆ.

ಮಹಿಳೆಯರ ವಿಭಾಗ
500 ಕೆಜಿ ಗಿಂತ ಕಡಿಮೆ ವಿಭಾಗದಲ್ಲಿ ಮಾರಮ್ಮಕೊಡಗು ತಂಡ, ಮೈಸೂರು ಬಿಜೆಪಿ ಮಹಿಳಾ ಮೋರ್ಚಾ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಪಡೆದವು. 540 ಕೆಜಿಗಿಂತ ಕಡಿಮೆ ತೂಕದ ವಿಭಾಗದಲ್ಲಿ ಕೂರ್ಗ್ ವಿಂಗ್ಸ್ ಪ್ರಥಮ ಹಾಗೂ ರೈನ್ ಬೋ ವಾರಿಯರ್ಸ್ ತಂಡ ಎರಡನೇ ಸ್ಥಾನ ಪಡೆಯಿತು. ಪ್ರತಿ ವಿಭಾಗದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ, ಪದಕ, ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

1 hour ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

1 hour ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

2 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

2 hours ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

2 hours ago