ಮೈಸೂರು ನಗರ

ಉದಯಗಿರಿ ಗಲಾಟೆ ಪ್ರಕರಣ: ಮೈಸೂರು ಚಲೋಗೆ ಅನುಮತಿ ನಿರಾಕರಣೆ

ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂದಿಸಿದಂತೆ ಉದಯಗಿರಿ ಪೊಲೀಸ್‌ ಠಾಣೆ ಹತ್ತಿರ ನಡೆದಿದ್ದ ಗಲಾಟೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಜನಜಾಗೃತಿ ಸಭೆಗೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಜಾರಿ ವಿರೋಧಿಸಿ ಬಿಜೆಪಿ ಪಕ್ಷ ಹೈಕೋರ್ಟ್‌ ಮೊರೆ ಹೋಗಿದ್ದು, ಒಂದು ವೇಳೆ ಅನುಮತಿ ಸಿಕ್ಕರೆ ಬಿಜೆಪಿ ಮತ್ತೊಮ್ಮೆ ಮೈಸೂರು ಚಲೋ ನಡೆಸಲಿದೆ.

ಈ ಕುರಿತು ಸಮಿತಿಯ ಸಂಚಾಲಕ ಮಹೇಶ್‌ ಕಡಗದಾಳು ಮಾತನಾಡಿ. ಬಂಧಿತ ಆರೋಪಿಗಳ ಮೇಲೆ ಯುಎಪಿಎ (UAPA) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಈ ಹಿನ್ನಲೆ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜನಜಾಗೃತಿ ಸಭೆ ಮಾಡಲಾಗುತ್ತಿತ್ತು. ಆದರೆ, ಸಭೆಗೆ ಅನುಮತಿ ನಿರಾಕರಿಸಿರುವುದರಿಂದ ನಿಶ್ಚಿತ ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಇನ್ನು ನಾಳೆಯ ಜನಾಂದೋಲನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಗಲಾಟೆಗೆ ಬಿಜೆಪಿ, ಆರ್‌ಎಸ್‌ಎಸ್‌ ಕಾರಣವೆಂದು ಕೆಲ ಸಂಘಟನೆಗಳು ಜನಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು. ಜೊತೆಗೆ ಈ ಕಾರ್ಯಕ್ರಮಗಳ ಆಯೋಜನೆಯು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತವೆ ಎಂದು ಪೊಲೀಸರು ಅನುಮತಿಗೆ ನಿರಾಕರಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago