ಮೈಸೂರು ನಗರ

ಉದಯಗಿರಿ ಗಲಾಟೆ ಪ್ರಕರಣ: ಮೈಸೂರು ಚಲೋಗೆ ಅನುಮತಿ ನಿರಾಕರಣೆ

ಮೈಸೂರು: ವಿವಾದಿತ ಪೋಸ್ಟ್‌ಗೆ ಸಂಬಂದಿಸಿದಂತೆ ಉದಯಗಿರಿ ಪೊಲೀಸ್‌ ಠಾಣೆ ಹತ್ತಿರ ನಡೆದಿದ್ದ ಗಲಾಟೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಜನಜಾಗೃತಿ ಸಭೆಗೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಜಾರಿ ವಿರೋಧಿಸಿ ಬಿಜೆಪಿ ಪಕ್ಷ ಹೈಕೋರ್ಟ್‌ ಮೊರೆ ಹೋಗಿದ್ದು, ಒಂದು ವೇಳೆ ಅನುಮತಿ ಸಿಕ್ಕರೆ ಬಿಜೆಪಿ ಮತ್ತೊಮ್ಮೆ ಮೈಸೂರು ಚಲೋ ನಡೆಸಲಿದೆ.

ಈ ಕುರಿತು ಸಮಿತಿಯ ಸಂಚಾಲಕ ಮಹೇಶ್‌ ಕಡಗದಾಳು ಮಾತನಾಡಿ. ಬಂಧಿತ ಆರೋಪಿಗಳ ಮೇಲೆ ಯುಎಪಿಎ (UAPA) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಈ ಹಿನ್ನಲೆ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜನಜಾಗೃತಿ ಸಭೆ ಮಾಡಲಾಗುತ್ತಿತ್ತು. ಆದರೆ, ಸಭೆಗೆ ಅನುಮತಿ ನಿರಾಕರಿಸಿರುವುದರಿಂದ ನಿಶ್ಚಿತ ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಇನ್ನು ನಾಳೆಯ ಜನಾಂದೋಲನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಗಲಾಟೆಗೆ ಬಿಜೆಪಿ, ಆರ್‌ಎಸ್‌ಎಸ್‌ ಕಾರಣವೆಂದು ಕೆಲ ಸಂಘಟನೆಗಳು ಜನಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು. ಜೊತೆಗೆ ಈ ಕಾರ್ಯಕ್ರಮಗಳ ಆಯೋಜನೆಯು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತವೆ ಎಂದು ಪೊಲೀಸರು ಅನುಮತಿಗೆ ನಿರಾಕರಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

16 hours ago