ಮೈಸೂರು ನಗರ

ಮೈಸೂರು ಉದಯಗಿರಿ ಗಲಭೆ ಕೇಸ್:‌ ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿಗೆ ಜಾಮೀನು

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮುಂದೆ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್‌ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್‌ ನ್ಯಾಯಾಧೀಶರು ಈ ಆದೇಶ ಪ್ರಕಟಿಸಿದ್ದಾರೆ. ಆರೋಪಿ ಪರ ವಕೀಲ ಹ.ಮಾ.ಭಾಸ್ಕರ್‌ ವಾದ ಮಂಡಿಸಿದ್ದರು.

ಇದೇ ಫೆಬ್ರವರಿ.10ರಂದು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಅನ್ಯ ಕೋಮಿನ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ಈ ದಾಳಿಯಲ್ಲಿ ಇನ್ಸ್‌ಪೆಕ್ಟರ್‌ ಸೇರಿದಂತೆ 14 ಮಂದಿ ಪೊಲೀಸರಿಗೆ ಗಂಭೀರ ಗಾಯಗಳಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳು ಜಖಂ ಆಗಿದ್ದವು. ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು 1000ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಸುಮೋಟೋ ಕೇಸ್‌ ದಾಖಲಿಸಿ ಈ ಬಗ್ಗೆ ಪೊಲೀಸ್‌ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago