ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಗಲಭೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಗಲಭೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಇದ್ದರು ಎಂದು ಹೇಳಿದ್ದಾರೆ.
ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಇರಿಸಲಾಗಿತ್ತು. ಆದರೆ ಫೆಬ್ರವರಿ.9ರಂದು ಆರೋಪಿ ಸತೀಶ್ ಎಂಬಾತನನ್ನು ಠಾಣೆಗೆ ಕರೆತರಲಾಗಿತ್ತು. ಬಳಿಕ ಅಂದು ರಾತ್ರಿ ಠಾಣೆ ಮುಂದೆ ಜಮಾಯಿಸಿದ ಅನ್ಯಕೋಮಿನ ಯುವಕರು ಆರೋಪಿಯನ್ನು ನಮ್ಮ ವಶಕ್ಕೆ ಕೊಡಿ, ನಮ್ಮ ಧರ್ಮದ ಬಗ್ಗೆ ಮಾತನಾಡಿದ್ದಾನೆ ಎಂದು ಕೂಗಾಟ ಆರಂಭಿಸಿದ್ದರು.
ಬಳಿಕ ಸಾವಿರ ಜನರ ಗುಂಪೊಂದು ಠಾಣೆ ಮುಂದೆ ಜಮಾವಣೆ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೂಗಾಟ ಮಾಡಿದ್ದರು.
ಈ ವೇಳೆ ಪೊಲೀಸರು ಎಷ್ಟೇ ಹೇಳಿದರೂ ಕೇಳದ ಗುಂಪು, ಠಾಣೆ ಹಾಗೂ ವಾಹನಗಳ ಮೇಲೆ ಏಕಾಏಕಿ ಕಲ್ಲಿನ ದಾಳಿ ನಡೆಸಿದರು. ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇನ್ನು ಕಲ್ಲು ತೂರಾಟದಿಂದ ಸಾರ್ವಜನಿಕರಿಗೂ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಘಟನೆ ನಡೆಯುತ್ತಿದ್ದಂತೆ ಹೆಚ್ಚಿನ ಅನಾಹುತ ಸಂಭವಿಸದಂತೆ ಉದಯಗಿರಿ ಠಾಣೆ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿತ್ತು. ಈಗ ಪರಿಸ್ಥಿತಿ ಶಾಂತವಾಗಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…