ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಗಲಭೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಗಲಭೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಇದ್ದರು ಎಂದು ಹೇಳಿದ್ದಾರೆ.
ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಇರಿಸಲಾಗಿತ್ತು. ಆದರೆ ಫೆಬ್ರವರಿ.9ರಂದು ಆರೋಪಿ ಸತೀಶ್ ಎಂಬಾತನನ್ನು ಠಾಣೆಗೆ ಕರೆತರಲಾಗಿತ್ತು. ಬಳಿಕ ಅಂದು ರಾತ್ರಿ ಠಾಣೆ ಮುಂದೆ ಜಮಾಯಿಸಿದ ಅನ್ಯಕೋಮಿನ ಯುವಕರು ಆರೋಪಿಯನ್ನು ನಮ್ಮ ವಶಕ್ಕೆ ಕೊಡಿ, ನಮ್ಮ ಧರ್ಮದ ಬಗ್ಗೆ ಮಾತನಾಡಿದ್ದಾನೆ ಎಂದು ಕೂಗಾಟ ಆರಂಭಿಸಿದ್ದರು.
ಬಳಿಕ ಸಾವಿರ ಜನರ ಗುಂಪೊಂದು ಠಾಣೆ ಮುಂದೆ ಜಮಾವಣೆ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೂಗಾಟ ಮಾಡಿದ್ದರು.
ಈ ವೇಳೆ ಪೊಲೀಸರು ಎಷ್ಟೇ ಹೇಳಿದರೂ ಕೇಳದ ಗುಂಪು, ಠಾಣೆ ಹಾಗೂ ವಾಹನಗಳ ಮೇಲೆ ಏಕಾಏಕಿ ಕಲ್ಲಿನ ದಾಳಿ ನಡೆಸಿದರು. ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇನ್ನು ಕಲ್ಲು ತೂರಾಟದಿಂದ ಸಾರ್ವಜನಿಕರಿಗೂ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಘಟನೆ ನಡೆಯುತ್ತಿದ್ದಂತೆ ಹೆಚ್ಚಿನ ಅನಾಹುತ ಸಂಭವಿಸದಂತೆ ಉದಯಗಿರಿ ಠಾಣೆ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿತ್ತು. ಈಗ ಪರಿಸ್ಥಿತಿ ಶಾಂತವಾಗಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…