ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ.
ಘಟನೆಗೂ ಮುನ್ನಾ ಪ್ರಚೋದನಾಕಾರಿ ಭಾಷಣ ಮಾಡಿದ್ದ ರಾಜೀವ್ ನಗರ ನಿವಾಸಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಅಂದಿನಿಂದ ತಲೆಮರೆಸಿಕೊಂಡಿದ್ದರು. ಅಂದು ಆತ ಮಾಡಿದ್ದ ಭಾಷಣ ಎಲ್ಲೆಡೆ ವೈರಲ್ ಆಗಿತ್ತು. ಹೀಗಾಗಿ ಆತನ ಬಂಧನಕ್ಕೆ ಹೆಚ್ಚಿನ ಒತ್ತಡವಿತ್ತು.
ಆತನ ಬಂಧನಕ್ಕೆ ಸಿಸಿಬಿ ಪೊಲೀಸರು ತಂಡ ರಚನೆ ಮಾಡಿದ್ದರು. ಪೊಲೀಸರ ಸತತ ಕಾರ್ಯಾಚರಣೆ ಬೆನ್ನಲ್ಲೇ ಗುರುವಾರ ಮುಂಜಾನೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಆತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸದ್ಯ ಆರೋಪಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಆತನನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿದೆ.
ಇನ್ನು ವಿವಾದಿತ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್ ಎಂಬಾತನನ್ನು ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಅರೋಪಿಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಿಡುಗಡೆ ಬಳಿಕ ಗಡಿಪಾರಿಗೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…