ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಆದರೆ ಅಮಾಯಕರಿಗೆ ತೊಂದರೆ ಆಗಬಾರದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು, ಪೊಲೀಸ್ ಇಲಾಖೆ ಅಂದೇ ರಾತ್ರಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಬಾರದು. ಈಗ ಉದಯಗಿರಿ ಸಹಜ ಸ್ಥಿತಿಗೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕಾನೂನಿನಡಿ ಕ್ರಮ ಜರುಗಿಸಲಾಗುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ. ಆದರೆ ಒಂದು ಮಾತು ಹೇಳುತ್ತೇನೆ. ಅಮಾಯಕರಿಗೆ ತೊಂದರೆ ಆಗಬಾರದು. ಈ ಘಟನೆಗೆ ಮೂಲ ಕಾರಣ ಯಾರು. ಆ ಪೋಸ್ಟ್ ಹಾಕಿದ್ದು ಯಾರು? ಸಿದ್ಧಪಡಿಸಿದ್ದು ಯಾರು? ಅಂತಹವರನ್ನು ಪತ್ತೆ ಹಚ್ಚಿ ಎಂದು ಹೇಳಿದ್ದೇನೆ ಎಂದರು.
ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕಾಗಿ ಗಲಾಟೆ ವಿಕೋಪಕ್ಕೆ ತಿರುಗಿದೆ. ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪಾಗಿದೆ. ತಪ್ಪು ಮಾಡಿರುವ ಆರೋಪಿಗಳ ವಿರುದ್ಧ ಕ್ರಮ ಆಗುತ್ತದೆ ಎಂದು ಹೇಳಿದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…