ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಆದರೆ ಅಮಾಯಕರಿಗೆ ತೊಂದರೆ ಆಗಬಾರದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು, ಪೊಲೀಸ್ ಇಲಾಖೆ ಅಂದೇ ರಾತ್ರಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಬಾರದು. ಈಗ ಉದಯಗಿರಿ ಸಹಜ ಸ್ಥಿತಿಗೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕಾನೂನಿನಡಿ ಕ್ರಮ ಜರುಗಿಸಲಾಗುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ. ಆದರೆ ಒಂದು ಮಾತು ಹೇಳುತ್ತೇನೆ. ಅಮಾಯಕರಿಗೆ ತೊಂದರೆ ಆಗಬಾರದು. ಈ ಘಟನೆಗೆ ಮೂಲ ಕಾರಣ ಯಾರು. ಆ ಪೋಸ್ಟ್ ಹಾಕಿದ್ದು ಯಾರು? ಸಿದ್ಧಪಡಿಸಿದ್ದು ಯಾರು? ಅಂತಹವರನ್ನು ಪತ್ತೆ ಹಚ್ಚಿ ಎಂದು ಹೇಳಿದ್ದೇನೆ ಎಂದರು.
ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕಾಗಿ ಗಲಾಟೆ ವಿಕೋಪಕ್ಕೆ ತಿರುಗಿದೆ. ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪಾಗಿದೆ. ತಪ್ಪು ಮಾಡಿರುವ ಆರೋಪಿಗಳ ವಿರುದ್ಧ ಕ್ರಮ ಆಗುತ್ತದೆ ಎಂದು ಹೇಳಿದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…