ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಆದರೆ ಅಮಾಯಕರಿಗೆ ತೊಂದರೆ ಆಗಬಾರದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು, ಪೊಲೀಸ್ ಇಲಾಖೆ ಅಂದೇ ರಾತ್ರಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಬಾರದು. ಈಗ ಉದಯಗಿರಿ ಸಹಜ ಸ್ಥಿತಿಗೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕಾನೂನಿನಡಿ ಕ್ರಮ ಜರುಗಿಸಲಾಗುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪೊಲೀಸ್ ವಿಚಾರಣೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ. ಆದರೆ ಒಂದು ಮಾತು ಹೇಳುತ್ತೇನೆ. ಅಮಾಯಕರಿಗೆ ತೊಂದರೆ ಆಗಬಾರದು. ಈ ಘಟನೆಗೆ ಮೂಲ ಕಾರಣ ಯಾರು. ಆ ಪೋಸ್ಟ್ ಹಾಕಿದ್ದು ಯಾರು? ಸಿದ್ಧಪಡಿಸಿದ್ದು ಯಾರು? ಅಂತಹವರನ್ನು ಪತ್ತೆ ಹಚ್ಚಿ ಎಂದು ಹೇಳಿದ್ದೇನೆ ಎಂದರು.
ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕಾಗಿ ಗಲಾಟೆ ವಿಕೋಪಕ್ಕೆ ತಿರುಗಿದೆ. ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪಾಗಿದೆ. ತಪ್ಪು ಮಾಡಿರುವ ಆರೋಪಿಗಳ ವಿರುದ್ಧ ಕ್ರಮ ಆಗುತ್ತದೆ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…