ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು.
ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ, ದೇವರಾಜ ಅರಸು ರಸ್ತೆ, ರಾಮಸ್ವಾಮಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕರು ಕಿರಿ ಕಿರಿ ಅನುಭವಿಸಿದರು.
ಹಬ್ಬದ ಖರೀದಿ ಭರಾಟೆ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆ, ವಾಣಿ ವಿಲಾಸ ಮಾರುಕಟ್ಟೆ, ಹೂ-ಹಣ್ಣು, ತರಕಾರಿ, ಬೇವು-ಸೊಪ್ಪನ್ನು ಖರೀದಿಸಲು ಜನ ಮುಗಿ ಬಿದ್ದ ಕಾರಣ ರಸ್ತೆಗಳಲ್ಲಿ ವಾಹನಗಳು ನಿಂತುಕೊಂಡಿದ್ದವು.
ಜೊತೆಗೆ ರಾಜ್ಯ ರಾಜಧಾನಿ ಸೇರಿದಂತೆ ಹಲವು ಕಡೆಯಿಂದ ಮೈಸೂರಿನತ್ತ ಸಾರ್ವಜನಿಕರು ಧಾವಿಸಿದ್ದರಿಂದ ಕಾಲಿಡಲು ಸಾಧ್ಯವಿಲ್ಲದಷ್ಟು ವಾಹನ ದಟ್ಟನೆ ಉಂಟಾಯಿತು. ಟ್ರಾಫಿಕ್ ಪೊಲೀಸರು ಸಂಚಾರ ನಿಯಂತ್ರಿಸಲು ಪರದಾಡಿದರು.
ಗ್ರಾಮೀಣ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳು ರಸ್ ಆಗಿದ್ದ ದೃಶ್ಯಗಳು ಕಂಡು ಬಂದವು.
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…