ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು.
ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ, ದೇವರಾಜ ಅರಸು ರಸ್ತೆ, ರಾಮಸ್ವಾಮಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕರು ಕಿರಿ ಕಿರಿ ಅನುಭವಿಸಿದರು.
ಹಬ್ಬದ ಖರೀದಿ ಭರಾಟೆ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆ, ವಾಣಿ ವಿಲಾಸ ಮಾರುಕಟ್ಟೆ, ಹೂ-ಹಣ್ಣು, ತರಕಾರಿ, ಬೇವು-ಸೊಪ್ಪನ್ನು ಖರೀದಿಸಲು ಜನ ಮುಗಿ ಬಿದ್ದ ಕಾರಣ ರಸ್ತೆಗಳಲ್ಲಿ ವಾಹನಗಳು ನಿಂತುಕೊಂಡಿದ್ದವು.
ಜೊತೆಗೆ ರಾಜ್ಯ ರಾಜಧಾನಿ ಸೇರಿದಂತೆ ಹಲವು ಕಡೆಯಿಂದ ಮೈಸೂರಿನತ್ತ ಸಾರ್ವಜನಿಕರು ಧಾವಿಸಿದ್ದರಿಂದ ಕಾಲಿಡಲು ಸಾಧ್ಯವಿಲ್ಲದಷ್ಟು ವಾಹನ ದಟ್ಟನೆ ಉಂಟಾಯಿತು. ಟ್ರಾಫಿಕ್ ಪೊಲೀಸರು ಸಂಚಾರ ನಿಯಂತ್ರಿಸಲು ಪರದಾಡಿದರು.
ಗ್ರಾಮೀಣ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳು ರಸ್ ಆಗಿದ್ದ ದೃಶ್ಯಗಳು ಕಂಡು ಬಂದವು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…