ಮೈಸೂರು ನಗರ

ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಮೀಕ್ಷೆ, ಜಾತಿಗಣತಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಮಿಷನ್ ಪ್ರಕಾರ ಸೆಕ್ಷನ್ 9 ಸಬ್ ಕ್ಲಾಸ್ 2ರ ಪ್ರಕಾರ ಜಾತಿಗಣತಿ ನಡೆಸುವ ಹಾಗೇ ಇಲ್ಲ. ಯಾರನ್ನ ಸೇರಿಸಬೇಕು ಯಾರನ್ನ ತೆಗೆಯಬೇಕು ಎಂದು ಒಂದು ಸಮೀಕ್ಷೆ ಮಾತ್ರ ಮಾಡಿದ್ದಾರೆ. ಆದ್ದರಿಂದ ಇದೊಂದು ಸಮೀಕ್ಷೆ. ಜಾತಿ ಜನಗಣತಿ ಅಲ್ಲ. ಅವಶ್ಯಕತೆ ಬಿದ್ದರೆ ಮೀಸಲಾತಿ ಪ್ರಮಾಣವನ್ನ ಹೆಚ್ಚಳ ಮಾಡುವ ದೃಷ್ಟಿಯಿಂದ ಗಣತಿ ಅವಶ್ಯಕತೆ ಇದೆ. ನಾನೇ ಇದುವರೆಗೆ ಸಂಪೂರ್ಣವಾಗಿ ಜಾತಿಗಣತಿ ವರದಿ ಓದಿಲ್ಲ.

ಇದನ್ನೂ ಓದಿ:- ಆರ್‌ಎಸ್‌ನವರೇ ಮೋದಿಯನ್ನು ತೆಗೆಯಬೇಕು ಎಂದುಕೊಂಡಿದ್ದಾರೆ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೊದಲು ಈ ವಿಚಾರಕ್ಕೆ ಕೈ ಹಾಕಿದವರು ಸಿದ್ದರಾಮಯ್ಯನವರು ಬಳಿಕ ಬಿಹಾರ್‌ನಲ್ಲೂ ಶುರು ಮಾಡಿದರು. ದೇಶವಾರು ಜಾತಿ ಗಣತಿ ಆಗಬೇಕು ಎಂಬ ಒತ್ತಾಯ ಕೂಡ ಇದೆ.
ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ವೈಜ್ಞಾನಿಕವಾಗಿ ಚರ್ಚೆ ನಡೆಯುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂದು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಸೂಕ್ತ ನಿರ್ಧಾರ ಮಾಡುತ್ತಾರೆ ಎಂಬ ವಿಶ್ವಾಸ ಇದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ 95% ಸಮೀಕ್ಷೆ ಆಗಿದೆ ಎಂದು ಹೇಳುತ್ತಾರೆ ಎಂದರು.

ಇದನ್ನೂ ಓದಿ:- ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಇನ್ನು ಕೋಣನ‌ನ್ನು ನೀರಿಗೆ ತಳ್ಳಿ ಕೊಂಬನ್ನ ನೋಡಿ ವ್ಯಾಪಾರ ಮಾಡಿದಂತಾಗುತ್ತದೆ ಎಂದು ಗಾದೆ ಮಾತು ಹೇಳುವ ಮೂಲಕ ಜಾತಿ ಗಣತಿ ವರದಿ ಅಧ್ಯಯನ ಮಾಡದೇ ವಿರೋಧ ಮಾಡೋದು ಸರಿಯಲ್ಲ ಎಂದು ವಿರೋಧಿಗಳಿಗೆ ಟಾಂಗ್‌ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

50 mins ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

4 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

4 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

4 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

4 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

7 hours ago