ಮೈಸೂರು : ನಗರದಲ್ಲಿ ಓವರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್ಗಳಾಗಿ ಪರಿವರ್ತಿಸುವ 408 ಕೋಟಿ ರೂ. ವೆಚ್ಚದ ಯೋಜನೆಯನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅನುಷ್ಠಾನಗೊಳಿಸುತ್ತಿದೆ.
ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಅವಘಡಗಳನ್ನು ತಪ್ಪಿಸುವ ಉದ್ದೇಶದಿಂದ ಸೆಸ್ಕ್ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದೆ. ಈ ಮೂಲಕ ಮೈಸೂರು ನಗರದಾದ್ಯಂತ ಸುರಕ್ಷಿತ ಹಾಗೂ ಹೆಚ್ಚು ವಿಶ್ವಾಸಾರ್ಹ ವಿದ್ಯುತ್ ಸರಬರಾಜು ಖಚಿತಪಡಿಸಿಕೊಳ್ಳಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ.
ಇದನ್ನೂ ಓದಿ:-ಮೈ-ಬೆಂ ಹೆದ್ದಾರಿ ಅಪಘಾತ | 2 ವರ್ಷದಲ್ಲಿ 1,674 ಅಪಘಾತ, 215ಮಂದಿ ಸಾವು
ಮೈಸೂರು ನಗರದ ನಾಲ್ಕು ಉಪ ವಿಭಾಗಗಳಲ್ಲಿ 408.94 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಮೂಲಕ 1,100 ಕಿ.ಮೀ.ವರೆಗೆ ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಇದರಿಂದ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಹಾಗೂ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ಅಡಚಣೆ ಗಳನ್ನು ಗಮನಾರ್ಹ ವಾಗಿ ಕಡಿಮೆ ಮಾಡಬಹುದು.
ಮೈಸೂರು ನಗರದ ವಿವಿ ಮೊಹಲ್ಲಾ ವಿಭಾಗ, ಆರ್.ಕೆ.ನಗರ ಉಪ ವಿಭಾಗ, ಎನ್.ಆರ್.ವಿಭಾಗ, ಚಾಮುಂಡಿಪುರಂ ಮತ್ತು ಜ್ಯೋತಿನಗರ ಉಪ ವಿಭಾಗಗಳಲ್ಲಿ ಅಂಡರ್ ಗ್ರೌಂಡ್ ಕೇಬಲ್ ಅಳವಡಿಸಲಾಗುತ್ತಿದೆ.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…