ಮೈಸೂರಿನಲ್ಲಿ ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಪ್ರಗತಿ : 1,100 ಕಿ.ಮೀ ವರೆಗೆ ಕೇಬಲ್ ಅಳವಡಿಕೆ

ಮೈಸೂರು : ನಗರದಲ್ಲಿ ಓವ‌ರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408 ಕೋಟಿ ರೂ. ವೆಚ್ಚದ ಯೋಜನೆಯನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅನುಷ್ಠಾನಗೊಳಿಸುತ್ತಿದೆ.

ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಅವಘಡಗಳನ್ನು ತಪ್ಪಿಸುವ ಉದ್ದೇಶದಿಂದ ಸೆಸ್ಕ್ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದೆ. ಈ ಮೂಲಕ ಮೈಸೂರು ನಗರದಾದ್ಯಂತ ಸುರಕ್ಷಿತ ಹಾಗೂ ಹೆಚ್ಚು ವಿಶ್ವಾಸಾರ್ಹ ವಿದ್ಯುತ್‌ ಸರಬರಾಜು ಖಚಿತಪಡಿಸಿಕೊಳ್ಳಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ.

ಇದನ್ನೂ ಓದಿ:-ಮೈ-ಬೆಂ ಹೆದ್ದಾರಿ ಅಪಘಾತ | 2 ವರ್ಷದಲ್ಲಿ 1,674 ಅಪಘಾತ, 215ಮಂದಿ ಸಾವು

ಮೈಸೂರು ನಗರದ ನಾಲ್ಕು ಉಪ ವಿಭಾಗಗಳಲ್ಲಿ 408.94 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಮೂಲಕ 1,100 ಕಿ.ಮೀ.ವರೆಗೆ ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಇದರಿಂದ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಹಾಗೂ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ಅಡಚಣೆ ಗಳನ್ನು ಗಮನಾರ್ಹ ವಾಗಿ ಕಡಿಮೆ ಮಾಡಬಹುದು.

ಮೈಸೂರು ನಗರದ ವಿವಿ ಮೊಹಲ್ಲಾ ವಿಭಾಗ, ಆ‌ರ್.ಕೆ.ನಗರ ಉಪ ವಿಭಾಗ, ಎನ್.ಆರ್.ವಿಭಾಗ, ಚಾಮುಂಡಿಪುರಂ ಮತ್ತು ಜ್ಯೋತಿನಗರ ಉಪ ವಿಭಾಗಗಳಲ್ಲಿ ಅಂಡರ್ ಗ್ರೌಂಡ್ ಕೇಬಲ್ ಅಳವಡಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

4 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

6 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

7 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

8 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

10 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago