ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದನ್ನು ಅವರನ್ನೇ ಕೇಳಬೇಕು. ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚಾರ ಆರಂಭಿಸಿರುವುದು ದುರಂತ ಎಂದು ಹೇಳಿದರು.
ಇನ್ನು ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಮಾತನಾಡಿದ ಅವರು, ಯುದ್ಧ ಸಂಪೂರ್ಣ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನು ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದ್ರೆ ಎಲ್ಲರೂ ಬಹುಬೇಗ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಸಾಧ್ಯವಾದಷ್ಟು ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರವು ಕೂಡ ಎಲ್ಲಾ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.
ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…